Featured

ರಾಜಕಾರಣಿಗಳ ಬದಲಾಗಿ ಹಿಂದೂ ಸಂಘಟನೆಗಳಿಗೆ ಬಲ ತುಂಬಿ : ಪ್ರಮೋದ್ ಮುತಾಲಿಕ್ – Vishwanews24

ರಾಜಕಾರಣಿಗಳ ಬದಲಾಗಿ ಹಿಂದೂ ಸಂಘಟನೆಗಳಿಗೆ ಬಲ ತುಂಬಿ ..

‘ರಾಜಕಾರಣಿಗಳಷ್ಟು ನಿರ್ಲಜ್ಜ, ನೀಚರು ಯಾರೂ ಇಲ್ಲ : ಪ್ರಮೋದ್ ಮುತಾಲಿಕ್

ಶಿವಮೊಗ್ಗ: ‘ರಾಜಕಾರಣಿಗಳಷ್ಟು ನಿರ್ಲಜ್ಜ, ನೀಚರು ಯಾರೂ ಇಲ್ಲ. ರಾಜಕಾರಣಿಗಳ ಬದಲಾಗಿ ಹಿಂದೂ ಸಂಘಟನೆಗಳಿಗೆ ಬಲ ತುಂಬಿ’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬುಧವಾರ ಹೇಳಿಕೆ ನೀಡಿದ್ದಾರೆ.

ಕುವೆಂಪು ರಂಗಮಂದಿರದಲ್ಲಿ ನಡೆದ ‘ವಿಧ್ವತ್ ಭಾರತ’ ಎಂಬ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್,’ನಮಗೆ ಬಲ ತುಂಬಿ, ನಿಮ್ಮ ದೇವಸ್ಥಾನ ಉಳಿಸುತ್ತೆವೆ.ನಮಗೆ ಬಲ ತುಂಬಿದರೆ, ನಿಮ್ಮ ಅಕ್ಕ-ತಂಗಿಯರನ್ನು ಉಳಿಸುತ್ತೆವೆ. ನಮಗೆ ಬಲ ತುಂಬಿ, ನಿಮ್ಮ ಹಸುವಿನ ಒಂದೇ ಒಂದು ಹನಿ ರಕ್ತ ಕೆಳಕ್ಕೆ ಬೀಳಲು ಬಿಡುವುದಿಲ್ಲ.ರಾಜಕಾರಣಿಗಳಿಗೆ ಬಲ ತುಂಬಬೇಡಿ. ಅವರಷ್ಟು ನಿರ್ಲಜ್ಜ, ನೀಚರು ಯಾರು ಇಲ್ಲ’ ಎಂದು ಕಿಡಿ ಕಾರಿದರು.

‘ಹಿಂದುತ್ವದ ಮುಖವಾಡ ಹೊತ್ತ ರಾಜಕಾರಣಿಗಳಿಗೆ ಧಿಕ್ಕಾರವಿರಲಿ .ರಾಜಕಾರಣಿಗಳು ಯಾವುದೇ ಪಕ್ಷದವರಾಗಿರಲಿ ಅವರಿಗೆ ಧಿಕ್ಕಾರವಿರಲಿ.ನಿಮಗೆ ನಾಚಿಕೆ, ಮಾನ, ಮರ್ಯಾದೆ ಇದೆಯಾ? ಹಿಂದುತ್ವದ ಮುಖವಾಡ ಹಾಕಿಕೊಂಡು ದೇಶದಲ್ಲಾಗುತ್ತಿರುವ ಅನಾಹುತಗಳಿಗೆ ಏನು ಹೇಳುತ್ತೀರಿ’ ಎಂದು ಪ್ರಶ್ನಿಸಿದರು.

‘ದೇವಸ್ಥಾನ ಒಡೆಯುತ್ತೀರಿ , ಸಾರ್ವಜನಿಕ ಗಣೇಶೋತ್ಸವ ಬ್ಯಾನ್ ಮಾಡುತ್ತೀರಿ, ದುರ್ಗಾ ಮಾತೆಯ ವಿಗ್ರಹ ಇಷ್ಟೇ ಇರಬೇಕೆಂದು ಹೇಳುತ್ತೀರಿ. ಸುಪ್ರೀಂ ಕೋರ್ಟ್ ನ ಆರ್ಡರ್ ತೋರಿಸಿ, ದೇವಾಲಯ ಒಡೆಯುತ್ತಿರಿ , ಮಸೀದಿಯ ಮೈಕ್ ಮತ್ತು ಮಸೀದಿ ತೆರವಿಗೂ ಸುಪ್ರೀಂ ಕೋರ್ಟ್ ಆರ್ಡರ್ ಇದೆ.ಅದನ್ಯಾಕೆ ತೋರಿಸುವುದಿಲ್ಲಾ’ ಎಂದು ಎಂದು ಪ್ರಶ್ನಿಸಿದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

23 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

23 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago