ಶಿವಮೊಗ್ಗ: ‘ರಾಜಕಾರಣಿಗಳಷ್ಟು ನಿರ್ಲಜ್ಜ, ನೀಚರು ಯಾರೂ ಇಲ್ಲ. ರಾಜಕಾರಣಿಗಳ ಬದಲಾಗಿ ಹಿಂದೂ ಸಂಘಟನೆಗಳಿಗೆ ಬಲ ತುಂಬಿ’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬುಧವಾರ ಹೇಳಿಕೆ ನೀಡಿದ್ದಾರೆ.
ಕುವೆಂಪು ರಂಗಮಂದಿರದಲ್ಲಿ ನಡೆದ ‘ವಿಧ್ವತ್ ಭಾರತ’ ಎಂಬ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್,’ನಮಗೆ ಬಲ ತುಂಬಿ, ನಿಮ್ಮ ದೇವಸ್ಥಾನ ಉಳಿಸುತ್ತೆವೆ.ನಮಗೆ ಬಲ ತುಂಬಿದರೆ, ನಿಮ್ಮ ಅಕ್ಕ-ತಂಗಿಯರನ್ನು ಉಳಿಸುತ್ತೆವೆ. ನಮಗೆ ಬಲ ತುಂಬಿ, ನಿಮ್ಮ ಹಸುವಿನ ಒಂದೇ ಒಂದು ಹನಿ ರಕ್ತ ಕೆಳಕ್ಕೆ ಬೀಳಲು ಬಿಡುವುದಿಲ್ಲ.ರಾಜಕಾರಣಿಗಳಿಗೆ ಬಲ ತುಂಬಬೇಡಿ. ಅವರಷ್ಟು ನಿರ್ಲಜ್ಜ, ನೀಚರು ಯಾರು ಇಲ್ಲ’ ಎಂದು ಕಿಡಿ ಕಾರಿದರು.
‘ಹಿಂದುತ್ವದ ಮುಖವಾಡ ಹೊತ್ತ ರಾಜಕಾರಣಿಗಳಿಗೆ ಧಿಕ್ಕಾರವಿರಲಿ .ರಾಜಕಾರಣಿಗಳು ಯಾವುದೇ ಪಕ್ಷದವರಾಗಿರಲಿ ಅವರಿಗೆ ಧಿಕ್ಕಾರವಿರಲಿ.ನಿಮಗೆ ನಾಚಿಕೆ, ಮಾನ, ಮರ್ಯಾದೆ ಇದೆಯಾ? ಹಿಂದುತ್ವದ ಮುಖವಾಡ ಹಾಕಿಕೊಂಡು ದೇಶದಲ್ಲಾಗುತ್ತಿರುವ ಅನಾಹುತಗಳಿಗೆ ಏನು ಹೇಳುತ್ತೀರಿ’ ಎಂದು ಪ್ರಶ್ನಿಸಿದರು.
‘ದೇವಸ್ಥಾನ ಒಡೆಯುತ್ತೀರಿ , ಸಾರ್ವಜನಿಕ ಗಣೇಶೋತ್ಸವ ಬ್ಯಾನ್ ಮಾಡುತ್ತೀರಿ, ದುರ್ಗಾ ಮಾತೆಯ ವಿಗ್ರಹ ಇಷ್ಟೇ ಇರಬೇಕೆಂದು ಹೇಳುತ್ತೀರಿ. ಸುಪ್ರೀಂ ಕೋರ್ಟ್ ನ ಆರ್ಡರ್ ತೋರಿಸಿ, ದೇವಾಲಯ ಒಡೆಯುತ್ತಿರಿ , ಮಸೀದಿಯ ಮೈಕ್ ಮತ್ತು ಮಸೀದಿ ತೆರವಿಗೂ ಸುಪ್ರೀಂ ಕೋರ್ಟ್ ಆರ್ಡರ್ ಇದೆ.ಅದನ್ಯಾಕೆ ತೋರಿಸುವುದಿಲ್ಲಾ’ ಎಂದು ಎಂದು ಪ್ರಶ್ನಿಸಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…