ರಾಜಕೀಯದಿಂದ ದೂರ ಉಳಿಯುವ ಪ್ರಶ್ನೆಯೇ ಇಲ್ಲ; ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು -Vishwanews24

Featured, ಉಡುಪಿ

ರಾಜಕೀಯದಿಂದ ದೂರ ಉಳಿಯುವ ಪ್ರಶ್ನೆಯೇ ಇಲ್ಲ; ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು -Vishwanews24

ಕಾಪು: ಕಾಂಗ್ರೆಸ್ ಮುಖಂಡ ಡಾ.ದೇವಿಪ್ರಸಾದ್ ಶೆಟ್ಟಿಯವರ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಂದಿಗಿರುವ ಸಂಶಯಾಸ್ಪದ ಒಡನಾಟದ ಕುರಿತು ಸಾರ್ವಜನಿವಾಗಿ ಬಹಳ‌ಷ್ಟು ಊಹಾಪೋಹಗಳು ಕೇಳಿಬರುತ್ತಿದ್ದು.ಶೆಟ್ಟಿಯವರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಹೋಗುವರೇ ಎಂಬ ಪ್ರಶ್ನೆಯು ಜನರಲ್ಲಿ ಮೂಡಿತ್ತು.ಈ ಕುರಿತು ಪ್ರತಿಕ್ರಿಯೆ ನೀಡಿದ ದೇವಿಪ್ರಸಾದ್ ಶೆಟ್ಟಿ, ಜನರ ಸಂಶಯವನ್ನು ಸುಳ್ಳಾಗಿಸಿದ್ದಾರೆ.

“ನಾನು ಕಳೆದ ಮೂವತ್ತು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ.ಸೊರಕೆಯವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಬಂದವನು.ಯಾವುದೇ ಕಾರಣಕ್ಕೂ ರಾಜಕೀಯದಿಂದ ದೂರ ಉಳಿಯುವ ಪ್ರಶ್ನೆಯೇ ಇಲ್ಲ.ಇತ್ತೀಚಿನ ದಿನಗಳಲ್ಲಿ ಕೊರೊನಾ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಪಕ್ಷದ ಕಾರ್ಯಕ್ರಮಗಳಲ್ಲಿ ನೇರವಾಗಿ ಭಾಗವಹಿಸಲು ತೊಡಕು ಉಂಟಾಗಿತ್ತು.ಈ ನಡುವೆಯು ಜನರ ಸಮಸ್ಯೆಗೆ ಸ್ಪಂದನೆ ನೀಡಿದ್ದೇನೆ.ಉತ್ತಮ ಒಡನಾಟದೊಂದಿಗೆ ಪಕ್ಷದಲ್ಲಿ ಮುಂದವರಿಯಲಿದ್ದೇವೆ ಎಂದರು.