ಚಿಕ್ಕಮಗಳೂರು, : ರಾಜಕೀಯದ ಸಹವಾಸವೇ ಬೇಡ ; ಶ್ರೀರಾಮಸೇನೆಯ ಮುಖಂಡರು ಮುಂದೆ ಯಾವುದೇ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯದ ಸಹವಾಸವೇ ಬೇಡ ಎಂಬ ತೀರ್ಮಾನ ಮಾಡಿದ್ದು, ಮುಂದೆ ಯಾವುದೇ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ. ಇನ್ನು ಮುಂದೆ ರಾಜಕೀಯದಿಂದ ದೂರವಿರಲು ತೀರ್ಮಾನಿಸಿದ್ದೇನೆ. ಶ್ರೀರಾಮಸೇನೆಯ ಯಾವುದೇ ಮುಖಂಡರೂ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ. ಸಂಘಟನೆಯನ್ನು ಬಲಪಡಿಸುತ್ತೇವೆ ಎಂದು ಹೇಳಿದರು.
ನಮ್ಮ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ನ್ಯಾಯಾಲಯದಲ್ಲಿ ಅಲೆಯುವಂತೆ ಮಾಡಲಾಗಿದೆ. ಹಲವು ನಿಷ್ಠಾವಂತ ಕಾರ್ಯಕರ್ತರು ಹತ್ತಾರು ವರ್ಷದಿಂದ ನ್ಯಾಯಾಲಯಕ್ಕೆ ಅಲೆಯುತ್ತಿದ್ದಾರೆ. ರಾಜಕೀಯ ಶಕ್ತಿ ಇದ್ದರೆ ಮಾತ್ರ ಇಂತಹವರಿಗೆ ನೆರವು ನೀಡಲು ಸಾಧ್ಯ ಎಂಬುದನ್ನು ಮನಗಂಡು ರಾಜಕೀಯ ಪ್ರವೇಶ ಮಾಡಿದ್ದೆ ಎಂದು ತಿಳಿಸಿದರು.
ರಾಜಕೀಯವಾಗಿ ನೆಲೆ ಕಂಡುಕೊಳ್ಳುವುದು ಕಷ್ಟವಾಗಿದೆ. ಹಣ, ಜಾತಿ ಮತ್ತು ಲಾಬಿ ಮಾಡುವ ಶಕ್ತಿ ಇದ್ದರೆ ಮಾತ್ರ ರಾಜಕೀಯದಲ್ಲಿ ನೆಲೆಯೂರಲು ಸಾಧ್ಯ. ಆದರೆ, ತಮಗೆ ಇದಾವುದೇ ಶಕ್ತಿ ಇಲ್ಲ. ಹಾಗಾಗಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಪಕ್ಷೇತರನಾಗಿ ಗೆದ್ದರೂ ಯಾರಿಗೂ ನೆರವು ನೀಡಲು ಸಾಧ್ಯವಿಲ್ಲ. ಬಿಜೆಪಿಯಾಗಲಿ, ಸಂಘಪರಿವಾರದವರಾಗಲಿ ನಿಷ್ಠಾವಂತ ಹಿಂದೂ ಪರ ಕಾರ್ಯಕರ್ತರಿಗೆ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದರು
ಸಂಘಪರಿವಾರದವರಿಗೆ ಪ್ರಾಮಾಣಿಕರು ಬೇಕಿಲ್ಲ. ಪ್ರವೀಣ್ ತೊಗಾಡಿಯಾ ಅವರಂತಹ ಹಿರಿಯ ಹಿಂದುತ್ವವಾದಿಯನ್ನೇ ಹೊರಹಾಕಿದ್ದಾರೆ. ಸಂಘಪರಿವಾರ ಮತ್ತು ಬಿಜೆಪಿಯವರು ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ ವಿನಃ ಬೇರೇನೂ ಮಾಡುತ್ತಿಲ್ಲ ಎಂದು ದೂರಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…