Featured

ರಾಜಕೀಯ ಕಚ್ಚಾಟ : ದೈವ ದೇವರ ಮೊರೆ ಹೋದ ಕಾಪು ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ರಾಜಕೀಯ ಸುಳ್ಳು ಆರೋಪ , ವೈಯಕ್ತಿಕ ದಾಳಿ :  ದೈವ ದೇವರ ಮೊರೆ ಹೋದ ಕಾಪು ಶಾಸಕ

ರಾಜಕೀಯ ನನಗೆ ಗಂಜಿ ಕೇಂದ್ರ ಅಲ್ಲ, ಅನಿವಾರ್ಯವೂ ಅಲ್ಲ: ಮಾಜಿ ಶಾಸಕರ ವಿರುದ್ಧ ಬೇಸರ

ಉಡುಪಿ,: ಕಂಬಳದ ವಿಚಾರವಾಗಿ ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶುರುವಾದ ರಾಜಕೀಯ ಕಚ್ಚಾಟವೀಗ ದೈವ ಮತ್ತು ದೇವರ ಅಂಗಳ ತಲುಪಿದೆ. ತನ್ನ ಮೇಲೆ ವೈಯಕ್ತಿಕ ದಾಳಿ ನಡೆಯುತ್ತಿದೆ ಎಂದು ಆರೋಪಿಸಿ ಬೇಸರಗೊಂಡಿರುವ ಬಿಜೆಪಿ ಶಾಸಕ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ದೇವರು ಮತ್ತು ದೈವದ ಮೊರೆ ಹೋಗಿದ್ದಾರೆ. ಕಾಪು ಶ್ರೀ ಹೊಸ ಮಾರಿಗುಡಿ ಅಮ್ಮನ ದೇಗುಲ ಮತ್ತು ಪೇಟೆಬೆಟ್ಟು ಬಬ್ಬು ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿ ಈ ಬಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ.

 

ಕಾಂಗ್ರೆಸ್​​ನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ವಿರುದ್ಧ ಬೇಸರ ಹೊರಹಾಕಿರುವ ಗುರ್ಮೆ ಸುರೇಶ್ ಶೆಟ್ಟಿ, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಾರೆ ಎಂದು ಆರೋಪಿಸಿದ್ದಾರೆ. ಮಾರಿಯಮ್ಮನ ಮುಂದೆ ಸತ್ಯ ಸಮರ್ಪಿಸಿದ್ದೇನೆ. ಎಲ್ಲವನ್ನು ತಾಯಿಯೇ ನೋಡಿಕೊಳ್ಳಲಿ ಎಂದು ಹೇಳುವ ಮೂಲಕ ವೈಯಕ್ತಿಕ ನಿಂದನೆ ವಿಚಾರಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಜೊತೆಗೆ ಬಬ್ಬು ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿಯೂ ಕೈ ಮುಗಿದು ಶಾಸಕರು ಪ್ರಾರ್ಥಿಸಿದ್ದು, ಸೊರಕೆ ಸವಾಲಿನ ಹಿನ್ನೆಲೆ ಈ ರೀತಿ ನಡೆದುಕೊಂಡಿರೋದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: 

ತಮ್ಮ ಮೇಲಿನ ಅದಿರು ಲೂಟಿ ಆರೋಪದ ಬಗ್ಗೆಯೂ ಬೇಸರ ವ್ಯಕ್ತಪಡಿಸಿರುವ ಶಾಸಕ ಗುರ್ಮೆ ಸುರೇಶ್​​ ಶೆಟ್ಟಿ, ನಾನು ಯಾವುದೇ ಅನ್ಯಾಯ ಮಾಡಿಲ್ಲ. ಮಗನ ಆರ್ಥಿಕ ವ್ಯವಹಾರದ ಬಗ್ಗೆ ಸೊರಕೆ ಮಾಡಿರುವ ಆರೋಪದಿಂದ ಮನನೊಂದು ದೇವರಿಗೆ ಶರಣಾಗಿದ್ದೇನೆ. ನನ್ನ ಕುಟುಂಬ ಯಾವುದೇ ಅವ್ಯವಹಾರದಲ್ಲಿ ತೊಡಗಿಲ್ಲ. ಪ್ರತಿ ಬಾರಿ ತನ್ನ ಕುಟುಂಬದ ಬಗ್ಗೆ ಸುಳ್ಳು ಹೇಳಿಕೆ ನೀಡುತ್ತಾರೆ. ಅನಾಚಾರ, ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಿದ್ದಾರೆ. ಒಂದು ಸುಳ್ಳನ್ನು 10 ಸರಿ ಹೇಳಿದಾಗ ಜನರು ನಂಬುತ್ತಾರೆ. ಅದೇ ಕಾರಣಕ್ಕೆ ನಾನು ದೇವರಿಗೆ ಮೊರೆ ಹೋಗಿದ್ದೇನೆ. ಸುಳ್ಳು ಸಾಯಬೇಕು ಸತ್ಯ ಗೆಲ್ಲಬೇಕು. ನನಗೆ ಬದುಕಿಗೆ ಬೇಕಾದಷ್ಟು ಸಂಪತ್ತು ಭಗವಂತ ಕೊಟ್ಟಿದ್ದು, 40 ವರ್ಷದಿಂದ ಉದ್ಯಮ ನಡೆಸುತ್ತಿದ್ದೇನೆ. ರಾಜಕೀಯ ನನಗೆ ಗಂಜಿ ಕೇಂದ್ರ ಅಲ್ಲ, ಅನಿವಾರ್ಯವೂ ಅಲ್ಲ. ಆದರೆ ಜನರಿಗೆ ತಪ್ಪು ಸಂದೇಶ ಹೋಗಬಾರದು. ನಾನು ಮಾಡಿರುವುದು ಪ್ರಾರ್ಥನೆ ಹೊರತು ಆಣೆ ಪ್ರಮಾಣ ಅಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago