ರಾಜಕೀಯ ನಾಯಕರ ಲಾಭಕ್ಕೆ ನಿಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ; ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರ ಮನವಿ – VIshwanews24

Featured, ರಾಜ್ಯ ನ್ಯೂಸ್

ರಾಜಕೀಯ ನಾಯಕರ ಲಾಭಕ್ಕೆ ನಿಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ; ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರ ಮನವಿ – VIshwanews24

ಬೆಂಗಳೂರು: ನಾಳೆಯಿಂದ ಪದವಿಪೂರ್ವ ಹಾಗೂ ಡಿಗ್ರಿ ಕಾಲೇಜುಗಳು ಆರಂಭವಾಗುತ್ತಿದ್ದು, ಹೈಕೋರ್ಟ್ ಆದೇಶಕ್ಕೆ ವಿದ್ಯಾರ್ಥಿಗಳು ಗೌರವ ನೀಡುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಯಾವುದೇ ಪ್ರಚೋದನೆಗಳಿಗೆ ಒಳಗಾಗಿ, ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ, ಶಿಕ್ಷಣವನ್ನು ಹಾಳು ಮಾಡಿಕೊಳ್ಳಬಾರದು.

ನಾಳೆಯಿಂದ ಕಾಲೇಜುಗಳು ಆರಂಭವಾಗುತ್ತಿವೆ. ಶಿಕ್ಷಣದತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ :

ಕಾಪುವಿಗೆ ಕಾಲಿಟ್ಟ ಹಿಜಾಬ್ ವಿವಾದ- ಫಕಿರಣಕಟ್ಟೆ ಉರ್ದು ಶಾಲೆಯ ವಠಾರ ಬೂದಿಮುಚ್ಚಿದ ಕೆಂಡದ ಪರಿಸ್ಥಿತಿ.vishwanews24

ವಿದ್ಯಾರ್ಥಿಗಳು ಯಾವುದೇ ಕೇಸರಿ ಶಾಲು, ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಬರುವಂತಿಲ್ಲ. ಹೈಕೋರ್ಟ್ ಆದೇಶ ಪಾಲಿಸಬೇಕು. ವಿದ್ಯಾರ್ಥಿಗಳ ಮನವೊಲಿಕೆ ಕೆಲಸವನ್ನು ಸಂಸ್ಥೆಗಳು ಮಾಡುತ್ತಿವೆ. ಯಾರೂ ಕೂಡ ರಾಜಕೀಯ ನಾಯಕರ ಮಾತಿಗೆ ಬೆಲೆ ಕೊಡಬೇಡಿ ಎಂದು ತಿಳಿಸಿದರು.

ಇನ್ನು ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ವಿಚಾರಣೆ ಮುಂದೂಡುವಂತೆ ಹೈಕೋರ್ಟ್ ನಲ್ಲಿ ವಿದ್ಯಾರ್ಥಿನಿಯರ ಪರ ವಕೀಲರಿಂದ ಬೇಡಿಕೆ ಸಲ್ಲಿಸಲಾಗಿದೆ. ರಾಜಕೀಯ ನಾಯಕರ ಮಾತು ಕೇಳಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ, ತರಗತಿಗಳಿಗೆ ಹೋಗದೇ ಹಠ ಹಿಡಿದು ಕುಳಿತರೆ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ಯೋಚಿಸಬೇಕು ಎಂದರು.

ಇದನ್ನೂ ಓದಿ :

ಟಿಟಿ ವಾಹನ ಅಪಘಾತ : ಶಬರಿ ಮಲೆಗೆ ತೆರಳಿದ ಕರ್ನಾಟಕದ ಮೂವರ ದುರ್ಮರಣ ; 11 ಜನರಿಗೆ ಗಾಯ – Vishwanews24

Leave a Reply