ಬೆಂಗಳೂರು: ನಾಳೆಯಿಂದ ಪದವಿಪೂರ್ವ ಹಾಗೂ ಡಿಗ್ರಿ ಕಾಲೇಜುಗಳು ಆರಂಭವಾಗುತ್ತಿದ್ದು, ಹೈಕೋರ್ಟ್ ಆದೇಶಕ್ಕೆ ವಿದ್ಯಾರ್ಥಿಗಳು ಗೌರವ ನೀಡುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಯಾವುದೇ ಪ್ರಚೋದನೆಗಳಿಗೆ ಒಳಗಾಗಿ, ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ, ಶಿಕ್ಷಣವನ್ನು ಹಾಳು ಮಾಡಿಕೊಳ್ಳಬಾರದು.
ನಾಳೆಯಿಂದ ಕಾಲೇಜುಗಳು ಆರಂಭವಾಗುತ್ತಿವೆ. ಶಿಕ್ಷಣದತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ :
ವಿದ್ಯಾರ್ಥಿಗಳು ಯಾವುದೇ ಕೇಸರಿ ಶಾಲು, ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಬರುವಂತಿಲ್ಲ. ಹೈಕೋರ್ಟ್ ಆದೇಶ ಪಾಲಿಸಬೇಕು. ವಿದ್ಯಾರ್ಥಿಗಳ ಮನವೊಲಿಕೆ ಕೆಲಸವನ್ನು ಸಂಸ್ಥೆಗಳು ಮಾಡುತ್ತಿವೆ. ಯಾರೂ ಕೂಡ ರಾಜಕೀಯ ನಾಯಕರ ಮಾತಿಗೆ ಬೆಲೆ ಕೊಡಬೇಡಿ ಎಂದು ತಿಳಿಸಿದರು.
ಇನ್ನು ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ವಿಚಾರಣೆ ಮುಂದೂಡುವಂತೆ ಹೈಕೋರ್ಟ್ ನಲ್ಲಿ ವಿದ್ಯಾರ್ಥಿನಿಯರ ಪರ ವಕೀಲರಿಂದ ಬೇಡಿಕೆ ಸಲ್ಲಿಸಲಾಗಿದೆ. ರಾಜಕೀಯ ನಾಯಕರ ಮಾತು ಕೇಳಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ, ತರಗತಿಗಳಿಗೆ ಹೋಗದೇ ಹಠ ಹಿಡಿದು ಕುಳಿತರೆ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ಯೋಚಿಸಬೇಕು ಎಂದರು.
ಇದನ್ನೂ ಓದಿ :
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…