Featured

ರಾಜಕೀಯ ಭಿನ್ನಾಬಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಈ ಕ್ರಮವನ್ನು ಪ್ರತಿಯೊಬ್ಬರೂ ಸ್ವಾಗತಿಸಬೇಕು : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ -Vishwanews24

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕುರಿತ ಕೇಂದ್ರ ಸರ್ಕಾರ ಕ್ರಮವನ್ನು ಸೋಮವಾರ ಪ್ರಶಂಸಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ರಾಜಕೀಯ ಭಿನ್ನಾಭಿಪ್ರಾಯಗಳು ಅಥವಾ ವ್ಯಕ್ತಿಗತ ಹಿತಾಸಕ್ತಿಗಳನ್ನು ಬದಿಗೊತ್ತಿ ಎಲ್ಲರೂ ಸ್ವಾಗತಿಸಬೇಕು ಎಂದು ಹೇಳಿದೆ.

ಜಮ್ಮು ಕಾಶ್ಮೀರ ಸೇರಿದಂತೆ ರಾಷ್ಟ್ರೀಯ ಹಿತಾಸಕ್ತಿಯಿಂದ ಅತ್ಯಂತ ಅಗತ್ಯವಾಗಿದ್ದ ದಿಟ್ಟಕ್ರಮವನ್ನು ಕೈಗೊಂಡಿರುವ ಸರ್ಕಾರವನ್ನು ಅಭಿನಂದಿಸುವುದಾಗಿ ಹೇಳಿದೆ.

ರಾಜಕೀಯ ಭಿನ್ನಾಬಿಪ್ರಾಯಗಳು ಹಾಗೂ ವ್ಯಕ್ತಿಗತ ಹಿತಾಸಕ್ತಿಗಳು ಏನೇ ಇರಲಿ ಅವುಗಳನ್ನು ಬದಿಗೊತ್ತಿ ಸರ್ಕಾರದ ಈ ಕ್ರಮವನ್ನು ಪ್ರತಿಯೊಬ್ಬರೂ ಸ್ವಾಗತಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸಂವಿಧಾನಾತ್ಮಾಕ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂವಿಧಾನದ ವಿಧಿ 370 ರದ್ಧು ಪಡಿಸುವ ಸಂಬಂಧ ರಾಜ್ಯಸಭೆಯಲ್ಲಿ ಶಾಸನ ಬದ್ಧ ನಿರ್ಣಯ ಮಂಡಿಸಿದೆ.

ಪ್ರತಿಪಕ್ಷಗಳ ವಿರೋಧ ಹಾಗೂ ಆಕ್ರೋಶಗಳ ನಡುವೆಯೇ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮೀರ ಪುನರ್ ವಿಂಗಡನಾ ವಿಧೇಯಕ 2019 ಮಂಡಿಸಿದರು.

 

Vishwa News 24

Recent Posts

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

1 minute ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

10 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

19 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

26 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

49 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

55 minutes ago