ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಸಂಬಂಧದ ಸಾಧ್ಯಾಸಾಧ್ಯತೆಗಳ ಕುರಿತ ವರದಿ ಸಿದ್ಧಪಡಿಸುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ 150 ಕಿಮೀ ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣ ಆರಂಭಿ ಸಬಾರದು ಎಂದು ಏರ್ಪೋರ್ಟ್ ಸಂಸ್ಥೆ ಜತೆ ಮಾಡಿಕೊಂಡ ಒಪ್ಪಂದದ ಅವಧಿ ಮುಂದಿನ 9 ವರ್ಷ ಗಳಲ್ಲಿ ಮುಗಿಯಲಿದ್ದು, ಹೀಗಾಗಿ ಈಗಲೇ ಸಿದ್ಧತೆ ಮಾಡಿ ಕೊಳ್ಳಬೇಕು ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಈ ಕುರಿತು ಹಿರಿಯ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದರು.
ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣವು 3ನೇ ಅತಿದಟ್ಟಣೆ ವಿಮಾನ ನಿಲ್ದಾಣ ಆಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ದಶಲಕ್ಷ ಪ್ರಯಾಣಿಕರು ಮತ್ತು 4 ಲಕ್ಷ ಟನ್ಗೂ ಹೆಚ್ಚು ಸರಕು-ಸಾಗಣೆ ನಿರ್ವ ಹಣೆ ಆಗಿದೆ. ಭವಿಷ್ಯದಲ್ಲಿ 2ನೇ ವಿಮಾನ ನಿಲ್ದಾಣದ ಅಗತ್ಯ ಇದೆ ಎಂದು ಸಚಿವ ಪಾಟೀಲ ತಿಳಿಸಿದರು.
ನಗರದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಧ್ಯಾಸಾಧ್ಯತೆಗಳ ವರದಿ ಸಿದ್ಧಪಡಿಸುವಂತೆ ಸೂಚಿಸಿದರು. ಬೆಂಗಳೂರಿನ ಜನಸಂಖ್ಯೆ ಈಗಾಗಲೇ ಒಂದು ಕೋಟಿ ದಾಟಿದೆ. ಇಲ್ಲಿ ಜಾಗತಿಕ ಮಟ್ಟದ ಕಂಪನಿಗಳಿವೆ. ಸುತ್ತಮುತ್ತಲಿನ ಜಿಲ್ಲೆಗಳ ಜತೆಗೆ ಆಂಧ್ರಪ್ರದೇಶದ ಕೆಲವು ಜಿಲ್ಲೆಗಳ ಜನರೂ ಈಗಿರುವ ವಿಮಾನ ನಿಲ್ದಾಣದ ಮೇಲೆ ಅವಲಂಬಿತ ರಾಗಿದ್ದಾರೆ. 2033ರ ಹೊತ್ತಿಗೆ ಈಗಿನ ವಿಮಾನ ನಿಲ್ದಾಣವು ಪ್ರಯಾಣಿಕರ ನಿರ್ವಹಣೆಯ ತುತ್ತತುದಿ ಮುಟ್ಟಲಿದೆ. ಸರಕು ಸಾಗಣೆ ಪ್ರಮಾಣ ಕೂಡ 2040ರ ಹೊತ್ತಿಗೆ ಈ ಮಟ್ಟ ಮುಟ್ಟಲಿದೆ ಎಂದು ಸಚಿವರು ಹೇಳಿದರು.
ಇನ್ನು ವಿಮಾನ ನಿಲ್ದಾಣ ನಿರ್ಮಿಸುವಾಗ ಬಿಐಎಎಲ್ ಸಂಸ್ಥೆ, ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡು 25 ವರ್ಷಗಳವರೆಗೆ (ಅಂದರೆ 2033) 150 ಕಿ.ಮೀ. ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿ ಸುವುದಿಲ್ಲ ಎಂದು ಹೇಳಿತ್ತು. ಈ ಷರತ್ತು 9 ವರ್ಷಗಳಲ್ಲಿ ಮುಗಿಯಲಿದೆ ಎಂದು ವಿವರಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…