ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಸಂಬಂಧದ ಸಾಧ್ಯಾಸಾಧ್ಯತೆಗಳ ಕುರಿತ ವರದಿ ಸಿದ್ಧಪಡಿಸುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ 150 ಕಿಮೀ ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣ ಆರಂಭಿ ಸಬಾರದು ಎಂದು ಏರ್ಪೋರ್ಟ್ ಸಂಸ್ಥೆ ಜತೆ ಮಾಡಿಕೊಂಡ ಒಪ್ಪಂದದ ಅವಧಿ ಮುಂದಿನ 9 ವರ್ಷ ಗಳಲ್ಲಿ ಮುಗಿಯಲಿದ್ದು, ಹೀಗಾಗಿ ಈಗಲೇ ಸಿದ್ಧತೆ ಮಾಡಿ ಕೊಳ್ಳಬೇಕು ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಈ ಕುರಿತು ಹಿರಿಯ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದರು.
ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣವು 3ನೇ ಅತಿದಟ್ಟಣೆ ವಿಮಾನ ನಿಲ್ದಾಣ ಆಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ದಶಲಕ್ಷ ಪ್ರಯಾಣಿಕರು ಮತ್ತು 4 ಲಕ್ಷ ಟನ್ಗೂ ಹೆಚ್ಚು ಸರಕು-ಸಾಗಣೆ ನಿರ್ವ ಹಣೆ ಆಗಿದೆ. ಭವಿಷ್ಯದಲ್ಲಿ 2ನೇ ವಿಮಾನ ನಿಲ್ದಾಣದ ಅಗತ್ಯ ಇದೆ ಎಂದು ಸಚಿವ ಪಾಟೀಲ ತಿಳಿಸಿದರು.
ನಗರದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಧ್ಯಾಸಾಧ್ಯತೆಗಳ ವರದಿ ಸಿದ್ಧಪಡಿಸುವಂತೆ ಸೂಚಿಸಿದರು. ಬೆಂಗಳೂರಿನ ಜನಸಂಖ್ಯೆ ಈಗಾಗಲೇ ಒಂದು ಕೋಟಿ ದಾಟಿದೆ. ಇಲ್ಲಿ ಜಾಗತಿಕ ಮಟ್ಟದ ಕಂಪನಿಗಳಿವೆ. ಸುತ್ತಮುತ್ತಲಿನ ಜಿಲ್ಲೆಗಳ ಜತೆಗೆ ಆಂಧ್ರಪ್ರದೇಶದ ಕೆಲವು ಜಿಲ್ಲೆಗಳ ಜನರೂ ಈಗಿರುವ ವಿಮಾನ ನಿಲ್ದಾಣದ ಮೇಲೆ ಅವಲಂಬಿತ ರಾಗಿದ್ದಾರೆ. 2033ರ ಹೊತ್ತಿಗೆ ಈಗಿನ ವಿಮಾನ ನಿಲ್ದಾಣವು ಪ್ರಯಾಣಿಕರ ನಿರ್ವಹಣೆಯ ತುತ್ತತುದಿ ಮುಟ್ಟಲಿದೆ. ಸರಕು ಸಾಗಣೆ ಪ್ರಮಾಣ ಕೂಡ 2040ರ ಹೊತ್ತಿಗೆ ಈ ಮಟ್ಟ ಮುಟ್ಟಲಿದೆ ಎಂದು ಸಚಿವರು ಹೇಳಿದರು.
ಇನ್ನು ವಿಮಾನ ನಿಲ್ದಾಣ ನಿರ್ಮಿಸುವಾಗ ಬಿಐಎಎಲ್ ಸಂಸ್ಥೆ, ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡು 25 ವರ್ಷಗಳವರೆಗೆ (ಅಂದರೆ 2033) 150 ಕಿ.ಮೀ. ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿ ಸುವುದಿಲ್ಲ ಎಂದು ಹೇಳಿತ್ತು. ಈ ಷರತ್ತು 9 ವರ್ಷಗಳಲ್ಲಿ ಮುಗಿಯಲಿದೆ ಎಂದು ವಿವರಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…