ರಾಜಭವನ ಮುತ್ತಿಗೆಗೆ ಯತ್ನ : ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ -Vishwanews24

Featured, ರಾಜ್ಯ ನ್ಯೂಸ್

ರಾಜಭವನ ಮುತ್ತಿಗೆಗೆ ಯತ್ನ : ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ -Vishwanews24

ಬೆಂಗಳೂರು : ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್ ನಿಂದ ರಾಜಭವನ ಮುತ್ತಿಗೆಗೆ ತೆರಳುತ್ತಿದ್ದಂತ ಕಾಂಗ್ರೆಸ್ ಮುಖಂಡರಾದಂತ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್, ತನ್ವೀರ್ ಸೇಠ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇಂದ್ರ ಸರ್ಕಾರ ಕಿತ್ತೊಗೆಯಲು ರೈತರ ತೀರ್ಮಾನ ಮಾಡಿದ್ದಾರೆ, ದೇಶದಲ್ಲಿ ಅರಾಜಕತೆ ಸೃಷ್ಠಿಯಾಗಿದೆ : ಸಿದ್ದರಾಮಯ್ಯ -Vishwanews24

ಇಂದು ಕಾಂಗ್ರೆಸ್ ಹಾಗೂ ಕಿಸಾನ್ ಘಟಕದಿಂದ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ರಾಜಭವನ ಮುತ್ತಿಗೆಗೆ ಕರೆ ನೀಡಲಾಗಿತ್ತು. ಮೆಜೆಸ್ಟಿಕ್ ನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಹೊರಟಂತ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ ನಲ್ಲಿ ಸಭೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದರು.

ಬಿಜೆಪಿ ಸರ್ಕಾರ ತನ್ನ ಅಹಂಕಾರಕ್ಕೆ ಅತೀ ಶೀಘ್ರದಲ್ಲಿಯೇ ತಕ್ಕ ಪ್ರತಿಫಲ ಅನುಭವಿಸಲಿದೆ : ಪ್ರಿಯಾಂಕ್ ಖರ್ಗೆ -Vishwanews24

ಈ ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳಿದಂತ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಪೊಲೀಸರು ಮನವೊಲಿಸೋದಕ್ಕೆ ಮುಂದಾಗಿದ್ದರು. ಆದ್ರೇ ಪೊಲೀಸರ ಮನವೊಲಿಕೆಗೆ ಒಪ್ಪದೇ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಂತ ಕಾಂಗ್ರೆಸ್ ಮುಖಂಡರಾದಂತ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕ ಕಾರ್ಯಕರ್ತರು, ರೈತರನ್ನು ಪೊಲೀಸರು ಮಹಾರಾಣಿ ಕಾಲೇಜಿನ ಬಳಿಯಲ್ಲೇ ವಶಕ್ಕೆ ಪಡೆದಿದ್ದಾರೆ.

ಫೆ. 26ರಿಂದ ಮಾಚ್೯ 2ರವರೆಗೆ ದೇಯಿ ಬೈದ್ಯೆತಿ – ಕೋಟಿ ಚೆನ್ನಯರ ಪುಣ್ಯ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ಜಾತ್ರಾ ಮಹೋತ್ಸವ -Vishwanews24