ಬೆಂಗಳೂರು : ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್ ನಿಂದ ರಾಜಭವನ ಮುತ್ತಿಗೆಗೆ ತೆರಳುತ್ತಿದ್ದಂತ ಕಾಂಗ್ರೆಸ್ ಮುಖಂಡರಾದಂತ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್, ತನ್ವೀರ್ ಸೇಠ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಕಾಂಗ್ರೆಸ್ ಹಾಗೂ ಕಿಸಾನ್ ಘಟಕದಿಂದ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ರಾಜಭವನ ಮುತ್ತಿಗೆಗೆ ಕರೆ ನೀಡಲಾಗಿತ್ತು. ಮೆಜೆಸ್ಟಿಕ್ ನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಹೊರಟಂತ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ ನಲ್ಲಿ ಸಭೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದರು.
ಈ ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳಿದಂತ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಪೊಲೀಸರು ಮನವೊಲಿಸೋದಕ್ಕೆ ಮುಂದಾಗಿದ್ದರು. ಆದ್ರೇ ಪೊಲೀಸರ ಮನವೊಲಿಕೆಗೆ ಒಪ್ಪದೇ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಂತ ಕಾಂಗ್ರೆಸ್ ಮುಖಂಡರಾದಂತ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕ ಕಾರ್ಯಕರ್ತರು, ರೈತರನ್ನು ಪೊಲೀಸರು ಮಹಾರಾಣಿ ಕಾಲೇಜಿನ ಬಳಿಯಲ್ಲೇ ವಶಕ್ಕೆ ಪಡೆದಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…