Featured

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆ : ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ -Vishwanews24

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆ : ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ -Vishwanews24

ಜೈಪುರ: ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

4,371 ಪಂಚಾಯತ್‌ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 1,835, ಕಾಂಗ್ರೆಸ್‌ 1,718 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ 56 ಮಂದಿ, 420 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜಿಲ್ಲಾ ಪರಿಷತ್‌ ಒಟ್ಟು 636 ಸ್ಥಾನಗಳ ಪೈಕಿ ಬಿಜೆಪಿ 266, ಕಾಂಗ್ರೆಸ್‌ 204 ಸ್ಥಾನಗಳನ್ನು ಗೆದ್ದುಕೊಂಡಿದೆ.

ಸಚಿನ್‌ ಪೈಲಟ್‌ ಪ್ರತಿನಿಧಿಸುತ್ತಿರುವ ಟೋಂಕ್‌ ಕ್ಷೇತ್ರದ ಒಟ್ಟು 25 ಸ್ಥಾನಗಳ ಪೈಕಿ ಬಿಜೆಪಿ 15 ಕಾಂಗ್ರೆಸ್‌ 10 ಸ್ಥಾನಗಳನ್ನು ಗೆದ್ದುಕೊಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್‌ ಪೂನಿಯಾ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿ ಮತ್ತೆ ಜನ ಬೆಂಬಲ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರೈತರು ಮತ್ತು ಗ್ರಾಮೀಣ ಭಾಗಕ್ಕೆ ನೀಡಿದ ಅಭಿವೃದ್ಧಿ ಕೆಲಸಗಳಿಂದ ಜನ ನಮಗೆ ಮತ ಹಾಕಿದ್ದಾರೆ. ಇದೊಂದು ಐತಿಹಾಸಿಕ ಜಯ ಎಂದು ಬಣ್ಣಿಸಿದ್ದಾರೆ.

ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ತಂದಿರುವ ನೀತಿಯನ್ನು ವಿರೋಧಿಸಿ ಕಾಂಗ್ರೆಸ್‌ ಪ್ರಾಯೋಜಕತ್ವದ ಭಾರತ್‌ ಬಂದ್‌ ನಡೆಯುತ್ತಿರುವಾಗಲೇ ರಾಜ್ಯದಲ್ಲಿ ಈ ಫಲಿತಾಂಶ ಬಂದಿರುವುದು ನಮಗೆ ಸಂತಸ ತಂದಿದೆ ಎಂದು ಸತೀಶ್‌ ಪೂನಿಯಾ ಹೇಳಿದರು.

ನ. 23, ನ.27, ಡಿ.1, ಡಿ.5 ರಂದು ಒಟ್ಟು 4 ಹಂತದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿತ್ತು.

Vishwa News 24

Recent Posts

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

6 minutes ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

12 minutes ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

22 minutes ago

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

15 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

21 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

23 hours ago