ಮುಂಬೈ: ಮುಂಬೈನಲ್ಲಿರುವ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ನಮ್ಮ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅವರಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ ಮುಂಬೈನಲ್ಲಿರುವ 10 ಶಾಸಕರು ಅರ್ಜಿಯನ್ನು ಸಲ್ಲಿಸಿದ್ದಾರೆ. ಶನಿವಾರ ನಾವು ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೂ ರಾಜೀನಾಮೆ ಅಂಗೀಕಾರವಾಗಿಲ್ಲ. ಹೀಗಾಗಿ ರಾಜೀನಾಮೆಯನ್ನು ಅಂಗೀಕಾರ ಮಾಡುವಂತೆ ಸ್ಪೀಕರ್ ಅವರಿಗೆ ಸೂಚನೆ ನೀಡಬೇಕೆಂದು 10 ಶಾಸಕರು ಮನವಿ ಮಾಡಿದ್ದಾರೆ.
ರಾಜೀನಾಮೆ ಅಂಗೀಕಾರಕ್ಕೆ ವಿಧಾನಸಭಾ ಸ್ಪೀಕರ್ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅತೃಪ್ತ ಶಾಸಕರ ಬಣ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
ಕ್ರಮಬದ್ಧವಾದ ರಾಜೀನಾಮೆಗಳನ್ನು ಕೂಡಾ ಸ್ಪೀಕರ್ ರಮೇಶ್ ಕುಮಾರ್ ಅವರು ಅಂಗೀಕರಿಸಿಲ್ಲ, ಉಳಿದ ರಾಜೀನಾಮೆಗಳನ್ನು ತಿರಸ್ಕರಿಸಲು ಸೂಕ್ತ ಕಾರಣ ಕೂಡಾ ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಆರೋಪಿಸಿ ರಮೇಶ್ ಕುಮಾರ್ ವಿರುದ್ಧ ಅತೃಪ್ತ ಶಾಸಕರು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಗುರುವಾರ(ಜುಲೈ 11) ಅರ್ಜಿ ವಿಚಾರಣೆಗೆ ಬರಲಿದೆ. ಅತೃಪ್ತರ ಪರ ಮುಕುಲ್ ರೋಹ್ಟಗಿ ಅವರು ವಾದಿಸಲಿದ್ದಾರೆ.
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…