ಶಿವಮೊಗ್ಗ: ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಬಿಜೆಪಿಯ ಹಲವು ಕಾರ್ಯಕರ್ತರು ರಾಜೀನಾಮೆ ನೀಡುತ್ತಿದ್ದು ಈ ವಿಚಾರವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ನಮ್ಮ ಹುಡುಗರಿಗೆ ಪ್ರಬುದ್ಧತೆ ಕಮ್ಮಿ. ಹಾಗಾಗಿ ರಾಜೀನಾಮೆ ನೀಡ್ತಿದ್ದಾರೆ. ಅವರು ರಾಜೀನಾಮೆ ಕೊಟ್ರೆ ಹೊಸಬರು ಬರ್ತಾರೆ, ಬಿಜೆಪಿಗೇನು ಕಾರ್ಯಕರ್ತರು ಸಿಗುವುದಿಲ್ಲವೇ ಎಂದು ಈಶ್ವರಪ್ಪ ಹೇಳಿದ್ದಾರೆ.
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಬಳಿಕ ಬಿಜೆಪಿಯ ಅನೇಕ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನಮ್ಮ ಹುಡುಗರಿಗೆ ಪ್ರಬುದ್ಧತೆ ಕಡಿಮೆ ಹಾಗಾಗಿ ಹಿರಿಯರ ಬಗ್ಗೆ ಮಾತನಾಡುತ್ತಾರೆ. ಹಿರಿಯರಾಗಿ ಅವರು ಬೈದರು ಎಂದು ನಾವು ಅವರಿಗೆ ವಾಪಸ್ ಬೈಯುವುದೇ ಸರಿಯೇ. ನಾವು ಅವರನ್ನು ಸಮಾಧಾನ ಮಾಡುತ್ತೇವೆ ಎಂದಿದ್ದಾರೆ.
ಯುವ ಕಾರ್ಯಕರ್ತರು ರಾಜೀನಾಮೆ ಕೊಟ್ಟರು ಎಂದಾಕ್ಷಣ ಅವರ ರಾಜೀನಾಮೆ ಅಂಗೀಕಾರ ಮಾಡಿ ಮನೆಗೆ ಕಳುಹಿಸುವುದು ಕೇವಲ ಐದು ನಿಮಿಷದ ಕೆಲಸ. ಆದರೆ ಅವರಿಗೆ ಸಮಾಧಾನ ಮಾಡುತ್ತೇವೆ. ಬದಲಾಗುತ್ತಾರೆ ಎಂಬ ನಂಬಿಕೆ ನಮಗಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…