Featured

ರಾಜೀನಾಮೆ ಕೊಡಿ ನಾನಿದ್ದೇನೆ ಎಂದು ಸಿದ್ದಾರ್ಥ್ ಅಣ್ಣ ನನಗೆ ಧೈರ್ಯ ತುಂಬಿದ್ದರು : ಅಣ್ಣಾಮಲೈ -Vishwanews24

ರಾಜೀನಾಮೆ ಕೊಡಿ ನಾನಿದ್ದೇನೆ ಎಂದು ಸಿದ್ದಾರ್ಥ್ ಅಣ್ಣ ನನಗೆ ಧೈರ್ಯ ತುಂಬಿದ್ದರು : ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಅಣ್ಣಾಮಲೈ -Vishwanews24

ಚಿಕ್ಕಮಗಳೂರು: ರಾಜೀನಾಮೆ ಕೊಡಿ ನಾನಿದ್ದೇನೆ ಎಂದು ಸಿದ್ದಾರ್ಥ್ ಅಣ್ಣ ಹೇಳಿದ್ದರು. ನನಗೆ ಧೈರ್ಯ ತುಂಬಿದ್ದರು. ನಾನು ಐಪಿಎಸ್ ಹುದ್ದೆಗೆ ರಾಜೀನಾಮೆ ಕೊಡುವ ಬಗ್ಗೆ ಇಬ್ಬರೂ ಸೇರಿ ನಿರ್ಧಾರ ಮಾಡಿದ್ದೆವು. ಪದೋನ್ನತಿ ಹೊಂದಿ ಡಿಐಜಿ, ಐಜಿ ಆಗಿ ಎಸಿ ಚೇಂಬರ್ ನಲ್ಲಿ ಕೂತು ಕೆಲಸ ಮಾಡಲು ಆಸಕ್ತಿ ಇಲ್ಲ ಎಂದಾಗ ಸಿದ್ದಾರ್ಥ್ ಅಣ್ಣ ಈ ಸಲಗೆ ಕೊಟ್ಟಿದ್ದರು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ದಿ. ಸಿದ್ದಾರ್ಥ್ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ಕಾಫಿ ಡೇ ಮಾಲೀಕ ದಿವಂಗತ ಸಿದ್ದಾರ್ಥ್ ಹೆಗ್ಡೆ ಅವರ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಬಂದಿದ್ದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜೀನಾಮೆ ಬಗ್ಗೆ ಸಿದ್ದಾರ್ಥ್ ಅಣ್ಣನನೊಂದಿಗೆ ಮೂರುವರೆ ಗಂಟೆ ಮಾತನಾಡಿದ್ದೆ ಎಂದರು.

ಇಬ್ಬರು ಬಂದು ಕಾರ್ ಡೋರ್ ತೆರೆಯುತ್ತಾರೆ. ನಾಲ್ವರು ಬಂದು ಸೆಲ್ಯೂಟ್ ಮಾಡ್ತಾರೆ. ಆಮೇಲೆ ಪ್ರಮೋಷನ್ ಇದೆಲ್ಲ ನನಗೆ ಇಷ್ಟ ಇಲ್ಲ. ಹಳ್ಳಿಗೆ ಹೋಗಬೇಕು. ಕೃಷಿ ಮಾಡಬೇಕು. ಸಾಮಾನ್ಯನಂತೆ ಬದುಕಿ ಸಾಮಾನ್ಯರ ಬದುಕನ್ನು ಬದಲಾವಣೆ ಮಾಡಬೇಕೆಂಬ ಆಸೆ ಇದೆ ಸರ್ ಎಂದು ಸಿದ್ದಾರ್ಥ್ ಅಣ್ಣನಿಗೆ ಹೇಳಿದ್ದೆ. ಆಗ ಈ ವಿಚಾರದಲ್ಲಿ ಅವರೇ ನನಗೆ ಧೈರ್ಯ ತುಂಬಿದ್ದರು ಎಂದು ಸಿದ್ದಾರ್ಥ್ ಹೆಗ್ಡೆ ಅವರನ್ನು ಅಣ್ಣಾಮಲೈ ನೆನಪಿಸಿಕೊಂಡರು.

ನಾನು ಏನು ಮಾಡಿದರೂ ಅವರು ಮೇಲಿಂದ ನೋಡುತ್ತಿದ್ದಾರೆ. ಅವರು ಯಾವಾಗಲು ನನ್ನೊಂದಿಗೆ ಇರುತ್ತಾರೆ. ಅವರು ನನಗೆ ಮಾರ್ಗದರ್ಶನ ಮಾಡಿದ್ದರು. ಅವರು ನನ್ನೊಂದಿಗೆ ನಿಂತು ಗೈಡ್ ಮಾಡುತ್ತಿರುತ್ತಾರೆ ಎಂದರು.

ಉಡುಪಿ : ಸ್ಕೂಟರ್‌‌ ಹಾಗೂ ಮೀನಿನ ಲಾರಿ ನಡುವೆ ಅಪಘಾತ : ಸ್ಕೂಟರ್‌ ಸವಾರ ಮೃತ್ಯು -Vishwanews24

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago