ಚಿಕ್ಕಮಗಳೂರು: ರಾಜೀನಾಮೆ ಕೊಡಿ ನಾನಿದ್ದೇನೆ ಎಂದು ಸಿದ್ದಾರ್ಥ್ ಅಣ್ಣ ಹೇಳಿದ್ದರು. ನನಗೆ ಧೈರ್ಯ ತುಂಬಿದ್ದರು. ನಾನು ಐಪಿಎಸ್ ಹುದ್ದೆಗೆ ರಾಜೀನಾಮೆ ಕೊಡುವ ಬಗ್ಗೆ ಇಬ್ಬರೂ ಸೇರಿ ನಿರ್ಧಾರ ಮಾಡಿದ್ದೆವು. ಪದೋನ್ನತಿ ಹೊಂದಿ ಡಿಐಜಿ, ಐಜಿ ಆಗಿ ಎಸಿ ಚೇಂಬರ್ ನಲ್ಲಿ ಕೂತು ಕೆಲಸ ಮಾಡಲು ಆಸಕ್ತಿ ಇಲ್ಲ ಎಂದಾಗ ಸಿದ್ದಾರ್ಥ್ ಅಣ್ಣ ಈ ಸಲಗೆ ಕೊಟ್ಟಿದ್ದರು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ದಿ. ಸಿದ್ದಾರ್ಥ್ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ಕಾಫಿ ಡೇ ಮಾಲೀಕ ದಿವಂಗತ ಸಿದ್ದಾರ್ಥ್ ಹೆಗ್ಡೆ ಅವರ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಬಂದಿದ್ದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜೀನಾಮೆ ಬಗ್ಗೆ ಸಿದ್ದಾರ್ಥ್ ಅಣ್ಣನನೊಂದಿಗೆ ಮೂರುವರೆ ಗಂಟೆ ಮಾತನಾಡಿದ್ದೆ ಎಂದರು.
ಇಬ್ಬರು ಬಂದು ಕಾರ್ ಡೋರ್ ತೆರೆಯುತ್ತಾರೆ. ನಾಲ್ವರು ಬಂದು ಸೆಲ್ಯೂಟ್ ಮಾಡ್ತಾರೆ. ಆಮೇಲೆ ಪ್ರಮೋಷನ್ ಇದೆಲ್ಲ ನನಗೆ ಇಷ್ಟ ಇಲ್ಲ. ಹಳ್ಳಿಗೆ ಹೋಗಬೇಕು. ಕೃಷಿ ಮಾಡಬೇಕು. ಸಾಮಾನ್ಯನಂತೆ ಬದುಕಿ ಸಾಮಾನ್ಯರ ಬದುಕನ್ನು ಬದಲಾವಣೆ ಮಾಡಬೇಕೆಂಬ ಆಸೆ ಇದೆ ಸರ್ ಎಂದು ಸಿದ್ದಾರ್ಥ್ ಅಣ್ಣನಿಗೆ ಹೇಳಿದ್ದೆ. ಆಗ ಈ ವಿಚಾರದಲ್ಲಿ ಅವರೇ ನನಗೆ ಧೈರ್ಯ ತುಂಬಿದ್ದರು ಎಂದು ಸಿದ್ದಾರ್ಥ್ ಹೆಗ್ಡೆ ಅವರನ್ನು ಅಣ್ಣಾಮಲೈ ನೆನಪಿಸಿಕೊಂಡರು.
ನಾನು ಏನು ಮಾಡಿದರೂ ಅವರು ಮೇಲಿಂದ ನೋಡುತ್ತಿದ್ದಾರೆ. ಅವರು ಯಾವಾಗಲು ನನ್ನೊಂದಿಗೆ ಇರುತ್ತಾರೆ. ಅವರು ನನಗೆ ಮಾರ್ಗದರ್ಶನ ಮಾಡಿದ್ದರು. ಅವರು ನನ್ನೊಂದಿಗೆ ನಿಂತು ಗೈಡ್ ಮಾಡುತ್ತಿರುತ್ತಾರೆ ಎಂದರು.
ಉಡುಪಿ : ಸ್ಕೂಟರ್ ಹಾಗೂ ಮೀನಿನ ಲಾರಿ ನಡುವೆ ಅಪಘಾತ : ಸ್ಕೂಟರ್ ಸವಾರ ಮೃತ್ಯು -Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…