ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ, ಈ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ವರದಿಗಳು ಸುಳ್ಳು ಎಂದು ಹೇಳಿದ್ದಾರೆ.
ರಾಜೀನಾಮೆ ವಿಚಾರವಾಗಿ ಮುಖ್ಯಮಂತ್ರಿಯ ಕಚೇರಿಯಿಂದ ಯಾವುದೇ ಕರೆ ಬಂದಿಲ್ಲ. ಅಂತಹ ಯಾವುದೇ ಚರ್ಚೆಯೂ ಆಗಿಲ್ಲ. ಇದು ಯಾರೋ ಕಿಡಿಗೇಡಿಗಳ ಹಬ್ಬಿಸಿರುವ ವದಂತಿ ಎಂದು ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಮಂಗಳವಾರ ಮುಖ್ಯಮಂತ್ರಿ ಕರೆದಿದ್ದ ಜಿಲ್ಲಾ ಶಾಸಕರ ಸಭೆಗೆ ಕ್ಷೇತ್ರದಲ್ಲಿ ಪೂರ್ವ ನಿಗದಿಯಾಗಿದ್ದ ಪ್ರಮುಖ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾಗವಹಿಸಲು ಆಗಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗೆ ಕರೆ ಮಾಡಿ ಮಾತನಾಡಿದ್ದೆ. ಇದನ್ನೇ ಅಪಾರ್ಥ ಮಾಡಿಕೊಂಡಿರುವ ಯಾರೋ ತನ್ನ ರಾಜೀನಾಮೆ ಬಗ್ಗೆ ವದಂತಿ ಹಬ್ಬಿಸಿದ್ದಾರೆ. ರಾಜೀನಾಮೆ ಬಗ್ಗೆ ಮಾಧ್ಯಮಗಳಲ್ಲೂ ಸುದ್ದಿ ಬಿತ್ತರವಾಗುತ್ತಿದ್ದು, ಅವೆಲ್ಲ ಸುದ್ದಿ ಸುಳ್ಳು ಎಂದು ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ ಭಾರೀ ಹಗರಣದ ಆರೋಪ ಹೊತ್ತಿರುವ ಸಚಿವ ನಾಗೇಂದ್ರರ ರಾಜೀನಾಮೆಗೆ ವಿರೋಧ ಪಕ್ಷಗಳು ಪ್ರಬಲವಾಗಿ ಒತ್ತಾಯಿಸುತ್ತಿವೆ.
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ…