ಅತೃಪ್ತ ಶಾಸಕರು ಬುಧವಾರ ಸ್ಪೀಕರ್ ವಿಳಂಬ ನೀತಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅತೃಪ್ತರ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ಕೈಗೆತ್ತಿಕೊಂಡು ವಿಚಾರಣೆ ನಡೆಸಿತು. ಮುಖ್ಯ ನ್ಯಾ.ರಂಜನ್ ಗೊಗಯ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಸಿತು. ಅತೃಪ್ತರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಕುಲ್ ರೋಹಟಿಗೆ ವಾದವನ್ನು ಆಲಿಸಿತು. ಇತ್ತ ಸಿಎಂ, ರಾಜ್ಯ ಸರ್ಕಾರ ಮತ್ತು ಸ್ಪೀಕರ್ ಅವರಿಗೆ ನೋಟಿಸ್ ರವಾನಿಸಿದ್ದು, ನಿಮ್ಮ ವಾದವನ್ನು ಮಂಡಿಸಬಹುದು ಎಂದು ತಿಳಿಸಿದೆ.