Featured

ರಾಜೀವ್‌ ಗಾಂಧಿಯವರ ಸಾವಿಗೆ ಬಿಜೆಪಿಯ ದ್ವೇಷವೇ ಕಾರಣ : ಕಾಂಗ್ರೆಸ್​ ನಾಯಕ ಅಹಮದ್​ ಪಟೇಲ್​ -Vishwanews24

ದೆಹಲಿ: ರಾಜೀವ್‌ ಗಾಂಧಿಯವರ ಸಾವಿಗೆ, ಬಿಜೆಪಿ ರಾಜೀವ್‌ ಗಾಂಧಿ ಮೇಲಿಟ್ಟಿದ್ದ ದ್ವೇಷವೇ ಕಾರಣ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಅಹ್ಮದ್‌ ಪಟೇಲ್‌ ಗುಡುಗಿದ್ದಾರೆ.

ರಾಜೀವ್​ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸುತ್ತಿರುವುದನ್ನು ವಿರೋಧಿಸಿ ಅಹಮದ್​ ಪಟೇಲ್​ ಟ್ವೀಟ್​ ಮಾಡಿದ್ದು, ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.

“ರಾಜೀವ್‌ ಗಾಂಧಿಯವರ ಹತ್ಯೆಗೆ ಯಾರು ಕಾರಣ? ಬಿಜೆಪಿ ಬೆಂಬಲವಿದ್ದ ವಿಪಿ ಸಿಂಗ್‌ ಸರ್ಕಾರ ರಾಜೀವ್‌ ಗಾಂಧಿಯವರಿಗೆ ಹೆಚ್ಚಿನ ರಕ್ಷಣೆ ನೀಡಲು ನಿರಾಕರಿಸಿತು. ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ತಿಳಿದಿದ್ದರೂ ಒಬ್ಬ ಪಿಎಸ್‌ಓ ಅನ್ನು ಮಾತ್ರ ಅವರೊಂದಿಗೆ ಬಿಡಲಾಯಿತು” ಎಂದು ಟ್ವೀಟ್‌ ಮಾಡುವ ಮೂಲಕ ಅಹ್ಮದ್‌ ಪಟೇಲ್‌ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಹರಿಯಾಣದಲ್ಲಿ ನಿನ್ನೆ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ “ರಾಜೀವ್‌ ಗಾಂಧಿ ಕುಟುಂಬ ಐಎನ್‌ಎಸ್‌ ವಿರಾಟ್‌ ವಿಮಾನವನ್ನು ಸ್ವಂತಕ್ಕೆ ಬಳಸಿಕೊಂಡಿತ್ತು. 10 ದಿನಗಳ ರೆಜೆಯನ್ನು ಆನಂಧಿಸಲು ಆ ಕುಟುಂಬ ಸಮುದ್ರ ತೀರಕ್ಕೆಂದು ನಿಯೋಜಿಸಿದ್ದ ವಿಮಾನವನ್ನು ಬಳಸಿಕೊಂಡಿತ್ತು. ವಿದೇಶಿಗರಿಗೆ ಆ ವಿಮಾನದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಹಾಗೇ ಮಾಡಿದ್ದು ರಾಷ್ಟ್ರ ರಕ್ಷಣೆಯೊಂದಿಗೆ ರಾಜಿ ಮಾಡಿಕೊಂಡಂತಲ್ಲವೇ? ಅವರು ದೇಶ ಮೊದಲು ಮತ್ತು ದೇಶದ ನಾಗರಿಕರ ಭದ್ರತೆಯನ್ನು ಎರಡನೆ ಸ್ಥಾನದಲ್ಲಿರಿಸಿದರು” ಎಂದು ಮೋದಿ  ವಾಗ್ವಾದ ನಡೆಸಿದ್ದರು.

ದಿವಂಗತರಾಗಿರುವ ಪ್ರಧಾನಿಯನ್ನು ಈ ರೀತಿಯಲ್ಲಿ ಹೆಸರಿಸುವುದು ನಿಮ್ಮ ಅಂತಿಮ ಮಟ್ಟದ ಹೇಡಿತನವನ್ನು ತೋರಿಸುತ್ತದೆ. ನಿಮ್ಮ ಆಧಾರರಹಿತ ವಾದಗಳಿಗೆ ಮತ್ತು ಅವರ ಮೇಲೆ ಹೊರಿಸುತ್ತಿರುವ ಆರೋಪಗಳಿಗೆ ಉತ್ತರಿಸಲು ರಾಜೀವ್‌ ಗಾಂಧಿ ಈಗ ನಮ್ಮೊಂದಿಗಿಲ್ಲ ಎಂದು ಅಹ್ಮದ್‌ ಹೇಳಿದ್ದಾರೆ.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

14 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

14 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

14 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago