ದೆಹಲಿ: ರಾಜೀವ್ ಗಾಂಧಿಯವರ ಸಾವಿಗೆ, ಬಿಜೆಪಿ ರಾಜೀವ್ ಗಾಂಧಿ ಮೇಲಿಟ್ಟಿದ್ದ ದ್ವೇಷವೇ ಕಾರಣ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಅಹ್ಮದ್ ಪಟೇಲ್ ಗುಡುಗಿದ್ದಾರೆ.
ರಾಜೀವ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸುತ್ತಿರುವುದನ್ನು ವಿರೋಧಿಸಿ ಅಹಮದ್ ಪಟೇಲ್ ಟ್ವೀಟ್ ಮಾಡಿದ್ದು, ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.
“ರಾಜೀವ್ ಗಾಂಧಿಯವರ ಹತ್ಯೆಗೆ ಯಾರು ಕಾರಣ? ಬಿಜೆಪಿ ಬೆಂಬಲವಿದ್ದ ವಿಪಿ ಸಿಂಗ್ ಸರ್ಕಾರ ರಾಜೀವ್ ಗಾಂಧಿಯವರಿಗೆ ಹೆಚ್ಚಿನ ರಕ್ಷಣೆ ನೀಡಲು ನಿರಾಕರಿಸಿತು. ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ತಿಳಿದಿದ್ದರೂ ಒಬ್ಬ ಪಿಎಸ್ಓ ಅನ್ನು ಮಾತ್ರ ಅವರೊಂದಿಗೆ ಬಿಡಲಾಯಿತು” ಎಂದು ಟ್ವೀಟ್ ಮಾಡುವ ಮೂಲಕ ಅಹ್ಮದ್ ಪಟೇಲ್ ಆಕ್ರೋಷ ವ್ಯಕ್ತಪಡಿಸಿದ್ದಾರೆ.
ಹರಿಯಾಣದಲ್ಲಿ ನಿನ್ನೆ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ “ರಾಜೀವ್ ಗಾಂಧಿ ಕುಟುಂಬ ಐಎನ್ಎಸ್ ವಿರಾಟ್ ವಿಮಾನವನ್ನು ಸ್ವಂತಕ್ಕೆ ಬಳಸಿಕೊಂಡಿತ್ತು. 10 ದಿನಗಳ ರೆಜೆಯನ್ನು ಆನಂಧಿಸಲು ಆ ಕುಟುಂಬ ಸಮುದ್ರ ತೀರಕ್ಕೆಂದು ನಿಯೋಜಿಸಿದ್ದ ವಿಮಾನವನ್ನು ಬಳಸಿಕೊಂಡಿತ್ತು. ವಿದೇಶಿಗರಿಗೆ ಆ ವಿಮಾನದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಹಾಗೇ ಮಾಡಿದ್ದು ರಾಷ್ಟ್ರ ರಕ್ಷಣೆಯೊಂದಿಗೆ ರಾಜಿ ಮಾಡಿಕೊಂಡಂತಲ್ಲವೇ? ಅವರು ದೇಶ ಮೊದಲು ಮತ್ತು ದೇಶದ ನಾಗರಿಕರ ಭದ್ರತೆಯನ್ನು ಎರಡನೆ ಸ್ಥಾನದಲ್ಲಿರಿಸಿದರು” ಎಂದು ಮೋದಿ ವಾಗ್ವಾದ ನಡೆಸಿದ್ದರು.
ದಿವಂಗತರಾಗಿರುವ ಪ್ರಧಾನಿಯನ್ನು ಈ ರೀತಿಯಲ್ಲಿ ಹೆಸರಿಸುವುದು ನಿಮ್ಮ ಅಂತಿಮ ಮಟ್ಟದ ಹೇಡಿತನವನ್ನು ತೋರಿಸುತ್ತದೆ. ನಿಮ್ಮ ಆಧಾರರಹಿತ ವಾದಗಳಿಗೆ ಮತ್ತು ಅವರ ಮೇಲೆ ಹೊರಿಸುತ್ತಿರುವ ಆರೋಪಗಳಿಗೆ ಉತ್ತರಿಸಲು ರಾಜೀವ್ ಗಾಂಧಿ ಈಗ ನಮ್ಮೊಂದಿಗಿಲ್ಲ ಎಂದು ಅಹ್ಮದ್ ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…