ನವದೆಹಲಿ, : ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಕುರಿತು ಹೇಳಿಕೆ ನೀಡಿದ್ದ ಪ್ರಧಾನಿ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ರಾಜೀವ್ ಸಾಯುವ ಮುನ್ನ ಅವರು ನಂ 1 ಭ್ರಷ್ಟರಾಗಿದ್ದರು ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಟೀಕೆ ಸಂಬಂಧ ಚುನಾವಣಾ ಆಯೋಗ (ಇಸಿ) ಪ್ರಧಾನಿಗೆ ಕ್ಲೀನ್ ಚಿಟ್ ನೀಡಿದೆ.
ಈಗಾಗಲೇ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕಿ ಸುಶ್ಮಿತಾ ದೇವ್ ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರಿ ನಂಬರ್ ಒನ್ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ, ಹಾಲಿ ಪ್ರಧಾನಿಯನ್ನು ಚೋರ್ ಎಂದು ಕಾಂಗ್ರೆಸ್ ಸಂಬೋಧಿಸುತ್ತದೆ. ಆದರೆ ರಾಜೀವ್ ಗಾಂಧಿಯನ್ನು ಭ್ರಷ್ಟಾಚಾರಿ ಎಂದರೆ ಅವರಿಗೆ ಸಮಸ್ಯೆ ಏನು ಎಂದು ಬಿಜೆಪಿ ಪ್ರಶ್ನಿಸಿದೆ.
ಪ್ರಧಾನಿ ಮೋದಿ ವಿರುದ್ಧ ಮಾದರಿ ನೀತಿ ಸಂಹಿತೆ ಆರೋಪ ಮಾಡಿದ್ದ ಕಾಂಗ್ರೆಸ್ ಆಯೋಗಕ್ಕೆ ದೂರು ಸಲ್ಲಿಸಿತ್ತು. ರಾಜೀವ್ ಅವರ ವಿರುದ್ಧ ಮೋದಿ ಟೀಕಿಸಿರುವುದು ಖಂಡನಾರ್ಹ ಎಂದಿದ್ದ ಕಾಂಗ್ರೆಸ್ ಮೋದಿ ಭಾರತ ರತ್ನ ಪುರಸ್ಕೃತರಿಗೆ ಅವಮಾನಿಸಿದ್ದಾರೆ ಎಂದು ಹೇಳಿತ್ತು.
ಇದೀಗ ಇದಕ್ಕೆ ಪ್ರತಿಕ್ರಿಯಿಸಿರುವ ಆಯೋಗ ಪ್ರಧಾನಿಯವರ ಹೇಳಿಕೆಗಳಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯಲ್ಲಿರುವಂತೆ ಎಂಸಿಸಿಯ ಯಾವುದೇ ಉಲ್ಲಂಘನೆಯನ್ನು ನಾವು ಗಮನಿಸಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಇಲ್ಲಿಗೇ ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…