ನವದೆಹಲಿ, : ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಕುರಿತು ಹೇಳಿಕೆ ನೀಡಿದ್ದ ಪ್ರಧಾನಿ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ರಾಜೀವ್ ಸಾಯುವ ಮುನ್ನ ಅವರು ನಂ 1 ಭ್ರಷ್ಟರಾಗಿದ್ದರು ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಟೀಕೆ ಸಂಬಂಧ ಚುನಾವಣಾ ಆಯೋಗ (ಇಸಿ) ಪ್ರಧಾನಿಗೆ ಕ್ಲೀನ್ ಚಿಟ್ ನೀಡಿದೆ.
ಈಗಾಗಲೇ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕಿ ಸುಶ್ಮಿತಾ ದೇವ್ ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರಿ ನಂಬರ್ ಒನ್ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ, ಹಾಲಿ ಪ್ರಧಾನಿಯನ್ನು ಚೋರ್ ಎಂದು ಕಾಂಗ್ರೆಸ್ ಸಂಬೋಧಿಸುತ್ತದೆ. ಆದರೆ ರಾಜೀವ್ ಗಾಂಧಿಯನ್ನು ಭ್ರಷ್ಟಾಚಾರಿ ಎಂದರೆ ಅವರಿಗೆ ಸಮಸ್ಯೆ ಏನು ಎಂದು ಬಿಜೆಪಿ ಪ್ರಶ್ನಿಸಿದೆ.
ಪ್ರಧಾನಿ ಮೋದಿ ವಿರುದ್ಧ ಮಾದರಿ ನೀತಿ ಸಂಹಿತೆ ಆರೋಪ ಮಾಡಿದ್ದ ಕಾಂಗ್ರೆಸ್ ಆಯೋಗಕ್ಕೆ ದೂರು ಸಲ್ಲಿಸಿತ್ತು. ರಾಜೀವ್ ಅವರ ವಿರುದ್ಧ ಮೋದಿ ಟೀಕಿಸಿರುವುದು ಖಂಡನಾರ್ಹ ಎಂದಿದ್ದ ಕಾಂಗ್ರೆಸ್ ಮೋದಿ ಭಾರತ ರತ್ನ ಪುರಸ್ಕೃತರಿಗೆ ಅವಮಾನಿಸಿದ್ದಾರೆ ಎಂದು ಹೇಳಿತ್ತು.
ಇದೀಗ ಇದಕ್ಕೆ ಪ್ರತಿಕ್ರಿಯಿಸಿರುವ ಆಯೋಗ ಪ್ರಧಾನಿಯವರ ಹೇಳಿಕೆಗಳಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯಲ್ಲಿರುವಂತೆ ಎಂಸಿಸಿಯ ಯಾವುದೇ ಉಲ್ಲಂಘನೆಯನ್ನು ನಾವು ಗಮನಿಸಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಇಲ್ಲಿಗೇ ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…