ಕಲಬುರಗಿ: ರಾಜ್ಯಕ್ಕೆ ಪ್ರತಿವರ್ಷ ಬರಬೇಕಿದ್ದ ಜಿಎಸ್ಟಿ ತೆರಿಗೆ ಪಾಲನ್ನು ಕೊಡದಿರಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ. ಅವರಿಗೆ ಕೇಂದ್ರ ಮತ್ತು ರಾಜ್ಯದ ಮಧ್ಯೆ ಆದ ಒಪ್ಪಂದದಂತೆ ನಮ್ಮ ಪಾಲಿನ ಹಣ ಕೊಡುವ ಆಸಕ್ತಿಯೇ ಇಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ಟಿ ನೀತಿ ಒಪ್ಪಿಕೊಂಡ ಬಳಿಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಗುವ ನಷ್ಟವನ್ನು 2022ರವರೆಗೂ ಭರ್ತಿ ಮಾಡಿಕೊಡಬೇಕು. ಆದರೆ, ರಾಜ್ಯಕ್ಕೆ ಬರಬೇಕಿರುವ ಪಾಲನ್ನು 15ನೇ ಹಣಕಾಸು ಆಯೋಗದಲ್ಲಿ ಗಣನೀಯವಾಗಿ ಇಳಿಕೆ ಮಾಡಿದ್ದಾರೆ. ಈ ಅನ್ಯಾಯಕ್ಕೆ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರೇ ಕಾರಣ’ ಎಂದು ಹರಿಹಾಯ್ದರು.
ರಾಜ್ಯದ ಬಿಜೆಪಿಯ 25 ಸಂಸದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಒಮ್ಮೆಯೂ ಧ್ವನಿ ಎತ್ತಿಲ್ಲ. ಅವರನ್ನು ಅಯ್ಕೆ ಮಾಡಿ ಕಳಿಸಿ ಪ್ರಯೋಜನವೇನು ಎಂದು ಪ್ರಶ್ನಿಸಿದರು.
14ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಢ 4.71ರಷ್ಟು ಜಿಎಸ್ಟಿ ನಷ್ಟ ಪರಿಹಾರ ಕೊಡಬೇಕಿತ್ತು. 15ನೇ ಹಣಕಾಸು ಆಯೋಗದಲ್ಲಿ ಶೇ 1.67 ನಷ್ಟು ಕಡಿತ ಮಾಡಿ ಶೇ 3.64ರಷ್ಟು ಮಾತ್ರ ನಷ್ಟ ಪರಿಹಾರ ಅನುದಾನ ಕೊಡಲು ಮುಂದಾಗಿದೆ. ಇದರಿಂದ ರಾಜ್ಯಕ್ಕೆ ₹ 78 ಸಾವಿರ ಕೋಟಿ ಬದಲು ₹ 40 ಸಾವಿರ ಕೋಟಿ ಮಾತ್ರ ಬರಲಿದೆ. ಅಲ್ಲದೇ ರಾಜ್ಯಕ್ಕೆ ಬರಬೇಕಿದ್ದ ₹ 5495 ಕೋಟಿ ವಿಶೇಷ ಪರಿಹಾರ ಕೊಡಲೂ ನಿರ್ಮಲಾ ಸೀತಾರಾಮನ್ ನಿರಾಕರಿಸಿದ್ದಾರೆ’ ಎಂದು ಹರಿಹಾಯ್ದರು.
‘ನಮ್ಮ ಪಾಲಿನ ಜಿಎಸ್ಟಿ ಪರಿಹಾರವನ್ನು ಹಕ್ಕಿನಿಂದ ಪಡೆಯುವ ಬದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಲ ಪಡೆಯಲು ಮುಂದಾಗಿದ್ದಾರೆ. ಆ ಸಾಲವನ್ನು ಸೆಸ್ ಹಾಕುವ ಮೂಲಕ ಭರಿಸಿಕೊಳ್ಳುವುದಾಗಿ ಕೇಂದ್ರ ತಿಳಿಸಿದೆ. ಇದು ಸರಿಯಲ್ಲ. ನಮ್ಮ ಪಾಲಿನ ತೆರಿಗೆ ಪಾಲನ್ನು ಕೂಡಲೇ ಕೊಡುವಂತೆ ಬೊಮ್ಮಾಯಿ ಅವರು ಒತ್ತಡ ಹೇರಬೇಕು’ ಎಂದು ಒತ್ತಾಯಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…