Featured

ರಾಜ್ಯಕ್ಕೆ ಪ್ರತಿವರ್ಷ ಬರಬೇಕಿದ್ದ ಜಿಎಸ್‌ಟಿ ಪಾಲು ಕೊಡದಿರಲು ಪ್ರಧಾನಿ ಮೋದಿ ಕಾರಣ: ಸಿದ್ದರಾಮಯ್ಯ – Vishwanews24

ರಾಜ್ಯಕ್ಕೆ ಪ್ರತಿವರ್ಷ ಬರಬೇಕಿದ್ದ ಜಿಎಸ್‌ಟಿ ಪಾಲು ಕೊಡದಿರಲು ಪ್ರಧಾನಿ ಮೋದಿ ಕಾರಣ: ಸಿದ್ದರಾಮಯ್ಯ – Vishwanews24

ಕಲಬುರಗಿ: ರಾಜ್ಯಕ್ಕೆ ಪ್ರತಿವರ್ಷ ಬರಬೇಕಿದ್ದ ಜಿಎಸ್‌ಟಿ ತೆರಿಗೆ ಪಾಲನ್ನು ಕೊಡದಿರಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ. ಅವರಿಗೆ ಕೇಂದ್ರ ಮತ್ತು ರಾಜ್ಯದ ಮಧ್ಯೆ ಆದ ಒಪ್ಪಂದದಂತೆ ನಮ್ಮ ಪಾಲಿನ ಹಣ‌ ಕೊಡುವ ಆಸಕ್ತಿಯೇ ಇಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ‌ನಾಯಕ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ಟಿ ನೀತಿ ಒಪ್ಪಿಕೊಂಡ ಬಳಿಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಗುವ ನಷ್ಟವನ್ನು 2022ರವರೆಗೂ ಭರ್ತಿ ಮಾಡಿಕೊಡಬೇಕು. ಆದರೆ, ರಾಜ್ಯಕ್ಕೆ ಬರಬೇಕಿರುವ ಪಾಲನ್ನು 15ನೇ ಹಣಕಾಸು ಆಯೋಗದಲ್ಲಿ ಗಣನೀಯವಾಗಿ ಇಳಿಕೆ ಮಾಡಿದ್ದಾರೆ. ಈ ಅನ್ಯಾಯಕ್ಕೆ  ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರೇ ಕಾರಣ’ ಎಂದು ಹರಿಹಾಯ್ದರು.

ರಾಜ್ಯದ ‌ಬಿಜೆಪಿಯ 25 ಸಂಸದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಒಮ್ಮೆಯೂ ಧ್ವನಿ ಎತ್ತಿಲ್ಲ. ಅವರನ್ನು ಅಯ್ಕೆ ಮಾಡಿ ಕಳಿಸಿ‌ ಪ್ರಯೋಜನವೇನು ಎಂದು ಪ್ರಶ್ನಿಸಿದರು.

14ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಢ 4.71ರಷ್ಟು ಜಿಎಸ್ಟಿ ನಷ್ಟ ಪರಿಹಾರ ಕೊಡಬೇಕಿತ್ತು. 15ನೇ ಹಣಕಾಸು ಆಯೋಗದಲ್ಲಿ ಶೇ 1.67 ನಷ್ಟು ಕಡಿತ ಮಾಡಿ ಶೇ 3.64ರಷ್ಟು ಮಾತ್ರ ನಷ್ಟ ಪರಿಹಾರ ಅನುದಾನ ಕೊಡಲು ಮುಂದಾಗಿದೆ. ಇದರಿಂದ ರಾಜ್ಯಕ್ಕೆ ₹ 78 ಸಾವಿರ ‌ಕೋಟಿ‌ ಬದಲು ₹ 40 ಸಾವಿರ ‌ಕೋಟಿ ಮಾತ್ರ ಬರಲಿದೆ. ಅಲ್ಲದೇ ರಾಜ್ಯಕ್ಕೆ ಬರಬೇಕಿದ್ದ ₹ 5495 ಕೋಟಿ ವಿಶೇಷ ಪರಿಹಾರ ‌ಕೊಡಲೂ ನಿರ್ಮಲಾ ಸೀತಾರಾಮನ್ ನಿರಾಕರಿಸಿದ್ದಾರೆ’ ಎಂದು ಹರಿಹಾಯ್ದರು.

‘ನಮ್ಮ‌ ಪಾಲಿನ ಜಿಎಸ್ಟಿ ಪರಿಹಾರವನ್ನು ಹಕ್ಕಿನಿಂದ ಪಡೆಯುವ ‌ಬದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಲ ಪಡೆಯಲು ‌ಮುಂದಾಗಿದ್ದಾರೆ.  ಆ ಸಾಲವನ್ನು ಸೆಸ್ ಹಾಕುವ ಮೂಲಕ ಭರಿಸಿಕೊಳ್ಳುವುದಾಗಿ ಕೇಂದ್ರ ತಿಳಿಸಿದೆ. ಇದು ಸರಿಯಲ್ಲ. ನಮ್ಮ ಪಾಲಿನ ತೆರಿಗೆ ಪಾಲನ್ನು ಕೂಡಲೇ ಕೊಡುವಂತೆ ಬೊಮ್ಮಾಯಿ ಅವರು ಒತ್ತಡ ಹೇರಬೇಕು’ ಎಂದು ಒತ್ತಾಯಿಸಿದರು.

ಮಂಗಳೂರು : ಸಮಾಜದಲ್ಲಿ ಹಲವಾರು ಭಾವನೆಗಳು ಇದ್ದು,ಅವುಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು : ಸಿಎಂ. ಬೊಮ್ಮಾಯಿ – Vishwanews24

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago