Featured

ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಬರಲಿವೆ : ಡಾ.ಕೆ.ಸುಧಾಕರ್ -Vishwanews24

ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಬರಲಿವೆ : ಡಾ.ಕೆ.ಸುಧಾಕರ್ –Vishwanews24

ಬೆಂಗಳೂರು : ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಬರಲಿವೆ. ಇದನ್ನು ಆನಂದರಾವ್ ವೃತ್ತದಲ್ಲಿರುವ ಸಂಗ್ರಹಾಗಾರದಲ್ಲಿ ಶೇಖರಣೆ ಮಾಡಿ ಇಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಗೆ ಈಗಾಗಲೇ ಪರವಾನಗಿ ನೀಡಿದೆ. ಕೇಂದ್ರ ಸರ್ಕಾರ 1.1 ಕೋಟಿ ಡೋಸ್ ಲಸಿಕೆ ಖರೀದಿ ಮಾಡಿದೆ. ಒಂದು ಡೋಸ್ ಗೆ 210 ರೂ. ನಿಗದಿ ಮಾಡಿದ್ದು, ಬೇರೆ ಯಾವ ದೇಶವೂ ಇಷ್ಟು ಕಡಿಮೆ ದರ ನಿಗದಿ ಮಾಡಿಲ್ಲ. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಲಸಿಕೆ ಖರೀದಿಸಲಾಗಿದೆ. ಲಸಿಕೆ ಖರೀದಿಗೆ ಒಟ್ಟು 231 ಕೋಟಿ ರೂ. ಖರ್ಚು ಮಾಡಲಾಗಿದೆ. ರಾಜ್ಯಕ್ಕೆ ಮೊದಲ ಹಂತದಲ್ಲಿ 7.95 ಲಕ್ಷ ಕೋವಿಶೀಲ್ಡ್ ಲಸಿಕೆಯ ವೈಲ್ ಪೂರೈಕೆಯಾಗಲಿದೆ ಎಂದರು.

ಪ್ರತಿ ಡೋಸ್ ನಲ್ಲಿ 0.5 ಎಂಎಲ್ ಪ್ರಮಾಣವಿರುತ್ತದೆ. ಒಂದು ವೈಲ್ ನಲ್ಲಿ 10 ಮಂದಿಗೆ ಲಸಿಕೆ ನೀಡಬಹುದು. ಮೊದಲ ಡೋಸ್ ಪಡೆದ 28 ದಿನಗಳ ಬಳಿಕ ಎರಡನೇ ಡೋಸ್ ಪಡೆಯಬೇಕು. ಲಸಿಕೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗುತ್ತದೆ. ಇದು ಸಂಪೂರ್ಣ ಸುರಕ್ಷಿತ ಎಂದರು.

ಇದು ಮಾರಾಟಕ್ಕಲ್ಲ ಎಂದು ಲಸಿಕೆಯ ವೈಲ್ ನಲ್ಲಿ ಬರೆಯಲಾಗಿದೆ. ಆರೋಗ್ಯ ಕ್ಷೇತ್ರದ ಸಿಬ್ಬಂದಿ, ಕೊರೊನಾ ನಿಯಂತ್ರಣ ಮಾಡುವ ಅಧಿಕಾರಿ, ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮಾರ್ಗಸೂಚಿ ಪ್ರಕಾರ ನಡೆಯಲಿದೆ. ಲಸಿಕೆ ಪಡೆದ ಬಳಿಕ ಅವರ ಮೇಲೆ ಕೆಲ ಸಮಯದವರೆಗೆ ಸೂಕ್ಷ್ಮವಾಗಿ ನಿಗಾ ಇರಿಸಲಾಗುತ್ತದೆ ಎಂದರು.

http://ಉಡುಪಿ : ಎಲ್ಲಾ ಮುಸಲ್ಮಾನರು ದೇಶದ್ರೋಹಿಗಳಲ್ಲ, ದೇಶಭಕ್ತರೂ ಕೂಡಾ ಇದ್ದಾರೆ,ಆದರೆ ರಾಷ್ಟ್ರ ಭಕ್ತರೆಲ್ಲರೂ ಬಿಜೆಪಿಯವರೇ : ಈಶ್ವರಪ್ಪ -Vishwanews24

 

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

5 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

6 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

6 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

6 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

10 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

11 hours ago