Featured

ರಾಜ್ಯದಲ್ಲಿಯೇ ಮಾದರಿಯಾದ ಶ್ರೇಷ್ಠ ದೇವಸ್ಥಾನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು: ಅತ್ಯಂತ ಯೋಜನಾಬದ್ಧವಾಗಿ ಮುಂದಿನ ಜನಾಂಗಕ್ಕೆ ಬೆಳಕಾಗಬಲ್ಲ ಹಾಗೂ ಭಾವುಕನೊಬ್ಬ ಪ್ರೀತಿ, ಹೆಮ್ಮೆಯಿಂದ ಆರಾಧನೆ ಮಾಡಬಹುದಾದ ಶ್ರೇಷ್ಠ ದೇವಸ್ಥಾನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವತಿಯಿಂದ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾನುವಾರ ಅವರು ಮಾತನಾಡಿದರು.

‘ರಾಜ್ಯದಲ್ಲಿ ಸುಮಾರು 34,500 ದೇವಾಲಯಗಳಿವೆ. ಇವುಗಳನ್ನೆಲ್ಲ ಸಮೀಕ್ಷೆ ಮಾಡಿದಾಗ ರಾಜ್ಯದಲ್ಲಿಯೇ ಮಾದರಿಯಾದ ದೇವಸ್ಥಾನ ಇದಾಗಿದೆ ಎಂಬುದು ನನ್ನ ಅನಿಸಿಕೆ’ ಎಂದರು.

ಭಕ್ತರೇ ಸ್ವಯಂಪ್ರೇರಿತರಾಗಿ ದಸರಾ ಸಂಭ್ರಮವನ್ನು ಅಚ್ಚುಕಟ್ಟಾಗಿ ನಡೆಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಹಿರಿಯರಾದ ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ವರ್ಷದಿಂದ ವರ್ಷಕ್ಕೆ ವೈಭವಯುತವಾಗಿ ನಡೆಯುತ್ತಿದೆ ಎಂದು ಹೇಳಿದರು.

ಮಂಗಳೂರು ದಸರಾ ಉದ್ಘಾಟಿಸಿದ ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ, ದಸರಾ ಮಹೋತ್ಸವದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಆ ದೇವರು ಸುಖ, ಶಾಂತಿ, ಸಮೃದ್ಧಿಯನ್ನು ನೀಡಲಿ ಎಂದು ಹಾರೈಸಿದರು.

ನಾಳೆ ಶೋಭಾಯಾತ್ರೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ತೆರೆ:

ಕುದ್ರೋಳಿಯ ನವರಾತ್ರಿಯ ಉತ್ಸವದ ನಡುವೆ ವಿವಿಧ ಕಾರ್ಯಕ್ರಮಗಳೊಂದಿಗೆ ಹಮ್ಮಿಕೊಳ್ಳಲಾಗಿರುವ ಮಂಗಳೂರು ದಸರಾ ಮಹೋತ್ಸವ ನಾಳೆ ವೈಭವದ ಶೋಭಾಯಾತ್ರೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ನಾಳೆ ತೆರೆ ಬೀಳಲ್ಲಿದೆ.

ಮಂಗಳೂರು ದಸರಾ’ ಮೆರವಣಿಗೆ ಅ. 8ರಂದು ಸಂಜೆ 4ಕ್ಕೆ ಶ್ರೀ ಕ್ಷೇತ್ರ ಕುದ್ರೋಳಿಯಿಂದ ಆರಂಭವಾಗಲಿದೆ. ಈ ಬಾರಿಯ ವಿಶೇಷವೆಂಬಂತೆ ನವದುರ್ಗೆಯರ ಸಹಿತ ಶಾರದಾ ಮಾತೆಯ ಶೋಭಾಯಾತ್ರೆ ಮೊದಲು ಸಾಗಲಿದ್ದು, ವಿವಿಧ ಸ್ತಬ್ಧಚಿತ್ರಗಳು ಹಿಂಬಾಲಿಸಲಿವೆ.75ಕ್ಕೂ ಅಧಿಕ ಅತ್ಯಾಕರ್ಷಕ ಸ್ತಬ್ಧಚಿತ್ರಗಳು, 100ಕ್ಕೂ ಅಧಿಕ ವೇಷಭೂಷಣಗಳು, ವಾದ್ಯಮೇಳ ತಂಡಗಳು ಭಾಗವಹಿಸಲಿವೆ.

ಕುದ್ರೋಳಿಯಿಂದ ಹೊರಡುವ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್‌ ಸರ್ಕಲ್‌, ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌, ಪಿ.ವಿ.ಎಸ್‌. ವೃತ್ತ, ಕೆ.ಎಸ್‌. ರಾವ್‌ ರಸ್ತೆ, ಹಂಪನಕಟ್ಟ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್‌ ಮಾರ್ಗವಾಗಿ ಶ್ರೀ ವೆಂಕಟಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್‌ ಅಳಕೆ ಮೂಲಕ ಮರಳಿ ಬರಲಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

5 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

6 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

7 hours ago