ಮಂಗಳೂರು: ಅತ್ಯಂತ ಯೋಜನಾಬದ್ಧವಾಗಿ ಮುಂದಿನ ಜನಾಂಗಕ್ಕೆ ಬೆಳಕಾಗಬಲ್ಲ ಹಾಗೂ ಭಾವುಕನೊಬ್ಬ ಪ್ರೀತಿ, ಹೆಮ್ಮೆಯಿಂದ ಆರಾಧನೆ ಮಾಡಬಹುದಾದ ಶ್ರೇಷ್ಠ ದೇವಸ್ಥಾನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವತಿಯಿಂದ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾನುವಾರ ಅವರು ಮಾತನಾಡಿದರು.
‘ರಾಜ್ಯದಲ್ಲಿ ಸುಮಾರು 34,500 ದೇವಾಲಯಗಳಿವೆ. ಇವುಗಳನ್ನೆಲ್ಲ ಸಮೀಕ್ಷೆ ಮಾಡಿದಾಗ ರಾಜ್ಯದಲ್ಲಿಯೇ ಮಾದರಿಯಾದ ದೇವಸ್ಥಾನ ಇದಾಗಿದೆ ಎಂಬುದು ನನ್ನ ಅನಿಸಿಕೆ’ ಎಂದರು.
ಭಕ್ತರೇ ಸ್ವಯಂಪ್ರೇರಿತರಾಗಿ ದಸರಾ ಸಂಭ್ರಮವನ್ನು ಅಚ್ಚುಕಟ್ಟಾಗಿ ನಡೆಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಹಿರಿಯರಾದ ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ವರ್ಷದಿಂದ ವರ್ಷಕ್ಕೆ ವೈಭವಯುತವಾಗಿ ನಡೆಯುತ್ತಿದೆ ಎಂದು ಹೇಳಿದರು.
ಮಂಗಳೂರು ದಸರಾ ಉದ್ಘಾಟಿಸಿದ ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ, ದಸರಾ ಮಹೋತ್ಸವದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಆ ದೇವರು ಸುಖ, ಶಾಂತಿ, ಸಮೃದ್ಧಿಯನ್ನು ನೀಡಲಿ ಎಂದು ಹಾರೈಸಿದರು.
ನಾಳೆ ಶೋಭಾಯಾತ್ರೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ತೆರೆ:
ಕುದ್ರೋಳಿಯ ನವರಾತ್ರಿಯ ಉತ್ಸವದ ನಡುವೆ ವಿವಿಧ ಕಾರ್ಯಕ್ರಮಗಳೊಂದಿಗೆ ಹಮ್ಮಿಕೊಳ್ಳಲಾಗಿರುವ ಮಂಗಳೂರು ದಸರಾ ಮಹೋತ್ಸವ ನಾಳೆ ವೈಭವದ ಶೋಭಾಯಾತ್ರೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ನಾಳೆ ತೆರೆ ಬೀಳಲ್ಲಿದೆ.
ಮಂಗಳೂರು ದಸರಾ’ ಮೆರವಣಿಗೆ ಅ. 8ರಂದು ಸಂಜೆ 4ಕ್ಕೆ ಶ್ರೀ ಕ್ಷೇತ್ರ ಕುದ್ರೋಳಿಯಿಂದ ಆರಂಭವಾಗಲಿದೆ. ಈ ಬಾರಿಯ ವಿಶೇಷವೆಂಬಂತೆ ನವದುರ್ಗೆಯರ ಸಹಿತ ಶಾರದಾ ಮಾತೆಯ ಶೋಭಾಯಾತ್ರೆ ಮೊದಲು ಸಾಗಲಿದ್ದು, ವಿವಿಧ ಸ್ತಬ್ಧಚಿತ್ರಗಳು ಹಿಂಬಾಲಿಸಲಿವೆ.75ಕ್ಕೂ ಅಧಿಕ ಅತ್ಯಾಕರ್ಷಕ ಸ್ತಬ್ಧಚಿತ್ರಗಳು, 100ಕ್ಕೂ ಅಧಿಕ ವೇಷಭೂಷಣಗಳು, ವಾದ್ಯಮೇಳ ತಂಡಗಳು ಭಾಗವಹಿಸಲಿವೆ.
ಕುದ್ರೋಳಿಯಿಂದ ಹೊರಡುವ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್, ಲಾಲ್ಬಾಗ್, ಬಲ್ಲಾಳ್ಬಾಗ್, ಪಿ.ವಿ.ಎಸ್. ವೃತ್ತ, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟಮಣ ದೇವಸ್ಥಾನದ ಮುಂಭಾಗದಿಂದ ಕಾರ್ಸ್ಟ್ರೀಟ್ ಅಳಕೆ ಮೂಲಕ ಮರಳಿ ಬರಲಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…