ಬೆಳಗಾವಿ : ರಾಜ್ಯದಲ್ಲಿರುವ ವಿದ್ಯುತ್ ಆಧುನೀಕರಣ, ವಿದ್ಯುತ್ ಲೈನ್ಗಳ ಸುಧಾರಣೆ, ಉಪಕೇಂದ್ರಗಳ ನಿರ್ಮಾಣ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರವು ಆರ್ಡಿಎಸ್ಎಸ್ ಯೋಜನೆಯಡಿ ರಾಜ್ಯಕ್ಕೆ 8300 ಕೋಟಿ ವಿಶೇಷ ಅನುದಾನವನ್ನು ನೀಡಲಿದೆ ಎಂದು ಇಂಧನ ಸಚಿವ ಸುನೀಲ್ಕುಮಾರ್ ವಿಧಾನಸಭೆಗೆ ಹೇಳಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಆರ್ಡಿಎಸ್ಎಸ್ ಯೋಜನೆಯಡಿ ಅನುದಾನ ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ. ಇದರಿಂದ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ವಿದ್ಯುತ್ ಸಮಸ್ಯೆ ನಿವಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರವು ಆರ್ಡಿಎಸ್ಎಸ್ ಯೋಜನೆಯಡಿ ಇಷ್ಟು ದೊಡ್ಡ ಮಟ್ಟದಲ್ಲಿ ಅನುದಾನ ಬಿಡುಗಡೆ ಮಾಡುತ್ತಿರುವುದರಿಂದ ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ 3,999 ಕೋಟಿ ಮೊತ್ತದಲ್ಲಿ ವಿದ್ಯುತ್ ಆಧುನೀಕರಣಗೊಳಿಸಬಹುದು.
ಕಲ್ಯಾಣ ಕರ್ನಾಟಕದ 21 ಕೇಂದ್ರಗಳ 63 ಸಬ್ ಸ್ಟೇಷನ್ ಹಾಗೂ ಕಿತ್ತೂರು ಕರ್ನಾಟಕದ ಅನೇಕ ಕಡೆ ಹೊಸ ಸಬ್ಸ್ಟೇಷನ್ಗಳು, ವಿದ್ಯುತ್ ಲೈನ್ಗಳು ಬರಲಿವೆ ಎಂದರು. ನಮ್ಮ ಇಲಾಖೆಯ ಅಧಿಕಾರಿಗಳು ಇಂದು ದೆಹಲಿಗೆ ತೆರಳಿದ್ದು, ನಾಳೆ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…