Featured

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಅಕ್ಟೋಬರ್ ಒಳಗೆ ನಡೆಯಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ದಿಸೆಯಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರಾವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಸದ್ಯ ಆಡಳಿತಾಧಿಕಾರಿಗಳ ಮೂಲಕ ಸ್ಥಳೀಯ ಸಂಸ್ಥೆಗಳ ಆಡಳಿತ ನಡೆಸಲಾಗುತ್ತಿದೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಈ ಎಲ್ಲಾ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಿ ಚುನಾವಣೆ ನಡೆಸಲು ಸರ್ಕಾರ ಆಸಕ್ತಿ ಹೊಂದಿದೆ ಎಂದು ಸಚಿವರು ತಿಳಿಸಿದರು.ಅಕ್ಟೋಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಗುರಿ ಸರ್ಕಾರದ ಮುಂದಿದ್ದು, ಅಗತ್ಯ ಸಿದ್ಧತೆಗಳನ್ನು ಸಂಬಂಧಿತ ಇಲಾಖೆಗಳು ಕೈಗೊಂಡಿವೆ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಿಂದ ಗ್ರಾಮೀಣ ಭಾಗಗಳಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ವಿವಿಧ ರಾಜಕೀಯ ಪಕ್ಷಗಳು ಹಾಗೂ ಆಕಾಂಕ್ಷಿಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದಾರೆ. ಅಧಿಕೃತ ಚುನಾವಣಾ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ.

Vishwa News 24

Recent Posts

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

48 seconds ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

17 minutes ago

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…

24 minutes ago

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ – vishwanews24

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…

3 hours ago

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…

3 hours ago

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

4 hours ago