ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ , ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ -Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ , ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ -Vishwanews24

ಮೈಸೂರು: ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ಅಕ್ರಮವಾಗಿದ್ದರೆ ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ‌ ನೀಡಿದ್ದಾರೆ.

ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ, ಕಾಮಗಾರಿಗಳು ಅಪಾರ ಪ್ರಮಾಣದಲ್ಲಿ ನಡೆಯುತ್ತಿವೆ. ಹೀಗಾಗಿ ಕಲ್ಲು ಗಣಿಗಾರಿಕೆ‌ ಅಗತ್ಯ. ಆದರೆ ಅನುಮತಿ ಪಡೆದು ಗಣಿಗಾರಿಕೆ ಮಾಡಿಲು ಅಭ್ಯಂತರ ಇಲ್ಲ. ಆದರೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದಿಲ್ಲ. ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಉಡುಪಿ: ಕಾರ್ಣಿಕ ಮೆರೆದ ಮೂಡುಸಗ್ರಿ ಸನ್ನಿಧಾನದ ಕೊರಗಜ್ಜ ಮತ್ತು ಕಲ್ಕುಡ ಶಕ್ತಿಗಳು -Vishwanews24

ಶಿವಮೊಗ್ಗದಲ್ಲಿ ಸ್ಪೋಟದಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಮನೆಗಳಿಗೂ ಹಾನಿಯಾಗಿದೆ ಅಂತ ಗೊತ್ತಾಗಿದೆ‌. ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ.

ಕೋವಿಡ್ ಕಾರಣದಿಂದ ಸಂಪನ್ಮೂಲ ಕೊರತೆ ಉಂಟಾಗಿದೆ. ಹೀಗಾಗಿ ಸಹಜವಾಗಿಯೇ ಬಜೆಟ್ ಗಾತ್ರ ಕಳೆದ ಬಾರಿಗಿಂತ ಕಡಿಮೆ ಇರಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು,