ರಾಜ್ಯದಲ್ಲಿ ಅತಿವಿವೃಷ್ಟಿಯಿಂದ ಜನತೆ ಕಂಗಾಲು ; ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ. :ಹೆಚ್ ಡಿ ದೇವೇಗೌಡ -Vishwanews24

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೋನಾ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ ಇದರ ಜೊತೆಗೆ ದುರದೃಷ್ಟವಷಾತ್ ರಾಜ್ಯದಲ್ಲಿ ಅತಿವಿವೃಷ್ಟಿಯಿಂದ ಜನತೆ ಕಂಗಾಲು ಪಡುವಂತಾಗಿದೆ. ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತತಕ್ಷಣ ಆಗಬೇಕಾಗಿದೆ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ. ಕೇಂದ್ರ ಸರ್ಕಾರ ಇಂತಹ ಸಂದರ್ಭದಲ್ಲಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಮುಖ್ಯಮಂತ್ರಿಗಳಿಗೆ ಕೊರೋನಾ ಸೋಂಕು ತಗುಲಿ, ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಸಂದರ್ಭ ಬಂದಿದೆ. ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳು ಮುಂಗಾರಿನ ಅಬ್ಬರದ ಭೀತಿಯಿಂದ ನಲುಗಿದೆ ಅದರಿಂದ ಮುಖ್ಯಮಂತ್ರೀಗಳು ಮತ್ತು ಸಚಿವರುಗಳು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದಿದ್ದಾರೆ.

ಅತಿವೃಷ್ಟಿ ಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿದೆ ಜೊತೆಗೆ ಮನೆ-ಮಠ ಕಳೆದುಕೊಂಡವರಿಗೆ ತಡಮಾಡದೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ. ಸತತ ನೆರೆಯಿಂದ ಸಂತ್ರಸ್ತರಾಗಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕೆಂದು ಮಾಧ್ಯಮಗಳ ಮುಖೇನ ಆಗ್ರಹಿಸುತ್ತಿನಿ ಈ ಸಂಬಂಧ ರಾಜ್ಯ ಸರ್ಕಾರವು ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಏರಬೇಕೆಂದು ಒತ್ತಾಯಿಸಿದ್ದಾರೆ.

ಅತಿವೃಷ್ಟಿ ಯಿಂದ ಹಾನಿಗೊಳಗಾಗಿರುವ ಸ್ಥಳಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ತಕ್ಷಣ ಹಣಕಾಸಿನ ವ್ಯವಸ್ಥೆಯನ್ನು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

Vishwa News 24

Recent Posts

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

8 minutes ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

13 minutes ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

28 minutes ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

34 minutes ago

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

21 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

22 hours ago