ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಅಕ್ರಮ ಬೇರೆ ಯಾರೂ ಮಾಡಿಲ್ಲ : ವಾಟಾಳ್ ನಾಗರಾಜ್ -Vishwanews24
ವಿಧಾನಪರಿಷತ್ ನಲ್ಲಿ ರೌಡಿಗಳು ಸದಸ್ಯರಾಗಿದ್ದಾರೆ. ಮರ್ಯಾದೆ ಇದ್ದರೇ ಕೂಡಲೇ ರಾಜೀನಾಮೆ ನೀಡಬೇಕು :
ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಿದ್ದೆ ಅಕ್ರಮವಾಗಿದೆ..
ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಅಕ್ರಮ ಬೇರೆ ಯಾರೂ ಮಾಡಿಲ್ಲ..
ಬೆಂಗಳೂರು : ವಿಧಾನಪರಿಷತ್ ನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ವಿಧಾನಪರಿಷತ್ ನಲ್ಲಿ ರೌಡಿಗಳು ಸದಸ್ಯರಾಗಿದ್ದಾರೆ. ಮರ್ಯಾದೆ ಇದ್ದರೇ ಕೂಡಲೇ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿದಿಲ್ಲ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಿದ್ದೆ ಅಕ್ರಮವಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಅಕ್ರಮ ಬೇರೆ ಯಾರೂ ಮಾಡಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪರಿಷತ್ ನಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಸಭಾಪತಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಕೆಲವರು ಪರಿಷತ್ ನಲ್ಲಿ ನಾಯಿಗಳಿಗಿಂತಲೂ ಕಡೆಯಾಗಿ ನಡೆದುಕೊಂಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
