ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ ಎಂದು ರಾಜ್ಯದ ಜನತೆಗೆ ಭರವಸೆ ನೀಡಲು ಬಯಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ಮಂಡಿಸಿದ್ದ ವಿಶ್ವಾಸಮತ ನಿರ್ಣಯಕ್ಕೆ ಸೋಲುಂಟಾದ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರೈತಪರ ಸರ್ಕಾರ ಇನ್ನು ಮುಂದೆ ರಾಜ್ಯದಲ್ಲಿ ಆಡಳಿತ ನಡೆಸಲಿದೆ’ ಎಂದು ನುಡಿದರು.
‘ನಾಡಿಗೆ ಅನ್ನ ಕೊಡುವ ಅನ್ನದಾತ ಬರಗಾಲದಿಂದ ತತ್ತರಿಸುತ್ತಿದ್ದಾನೆ. ರೈತ ಸಮುದಾಯಕ್ಕೆ ಬದುಕಿನಲ್ಲಿ ಭರವಸೆ ಹುಟ್ಟಿಸುವ ಕೆಲಸ ಮಾಡುತ್ತೇನೆ. ಇದು ಪ್ರಜಾಪ್ರಭುತ್ವದ ವಿಜಯ. ಜನರು ಕುಮಾರಸ್ವಾಮಿ ಸರ್ಕಾರದಿಂದ ರೋಸಿ ಹೋಗಿದ್ದರು. ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಇಲ್ಲಿಂದ ಆರಂಭವಾಗುತ್ತೆ ಅಂತ ಜನರಿಗೆ ಭರವಸೆ ಕೊಡುತ್ತೇನೆ’ ಎಂದು ಯಡಿಯೂರಪ್ಪ ನಗುಮೊಗದಿಂದ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…