ಬೆಂಗಳೂರು: ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ರಾಜಕೀಯ ದ್ವೇಷದಿಂದ ನನ್ನ ವಿರುದ್ಧ ಸಿಬಿಐ ವಿಚಾರಣೆ ನಡೆಸಲಾಗುತ್ತಿದೆ. ನಾನು ಮಾಡಬಾರದ ಕೆಲಸ ಮಾಡಿಲ್ಲ. ಹೀಗಾಗಿ ಹೆದರುವ ಅಗತ್ಯವಿಲ್ಲ. ನಾನು ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ ನೀಡಿದ್ದಾರೆ. ಇದುವರೆಗೂ ಯಾರ ಮೇಲೆ ಈ ರೀತಿ ತನಿಖೆ ಮಾಡಿಸಿದ್ದಾರೆ? ರಾಜ್ಯದಲ್ಲಿ ನಾನೊಬ್ಬನೇ ಆಸ್ತಿ ಸಂಪಾದಿಸಿದ್ದೇನಾ? ನನ್ನ ಮೇಲೆ ಯಾವುದಾದರೂ ದೂರು ದಾಖಲಾಗಿದೆಯಾ? ಯಾವುದಾದರೂ ಆರೋಪ ಸಾಬೀತಾಗಿದೆಯಾ? ಯಾರ ಬಳಿಯಾದರೂ ನಾನು ಲಂಚ ಪಡೆದಿದ್ದೇನಾ? ಅಧಿಕಾರ ದುರುಪಯೋಗ ಮಾಡಿಕೊಂಡಿದ್ದೇನಾ? ಇಂಧನ ಸಚಿವ ಆಗಿದ್ದಾಗ ಅಕ್ರಮ ಮಾಡಿದ್ದೇನಾ? ಯಡಿಯೂರಪ್ಪನವರೇ ಅಧಿಕಾರದಲ್ಲಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಲಿ. ಅದನ್ನು ಬಿಟ್ಟು ಸಿಬಿಐಗೆ ಕೊಡುವ ಅಗತ್ಯ ಏನಿತ್ತು?’ ಎಂದು ಅವರು ಖಾರವಾಗಿಯೇ ಪ್ರಶ್ನಿಸಿದರು.
‘ಇದೊಂದು ತನಿಖೆ ಮಾಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಅವರೇ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿರುವ ಎಸಿಬಿಯಿಂದಲೇ ವಿಚಾರಣೆ ನಡೆಸಬಹುದು ಎಂದು ತಿಳಿದ್ದಾರೆ. ಆದರೂ ಸರ್ಕಾರದ ಒತ್ತಡದ ಮೇಲೆ ಈ ವಿಚಾರಣೆ ನಡೆಯುತ್ತಿದೆ. ನಾನು ಸಿಬಿಐ ಅಧಿಕಾರಿಗಳ ತನಿಖಾ ವ್ಯವಸ್ಥೆ ಪ್ರಶ್ನಿಸುವುದಿಲ್ಲ. ಅವರು ನಮಗೆ ಯಾವುದೇ ರೀತಿಯ ತೊಂದರೆ ನೀಡುತ್ತಿಲ್ಲ. ಅವರು ಅವರ ಕರ್ತವ್ಯ ಮಾಡುತ್ತಿದ್ದಾರೆ.
ಅಹ್ಮದ್ ಪಟೇಲ್ ಅವರ ನಿಧನ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಮ್ಮ ಪಕ್ಷಕ್ಕೆ ನಿಷ್ಠೆಯಿಂದ ಇದ್ದ ನಾಯಕರು. ರಾಜ್ಯಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅವರು ಯಾವಾಗ ಬೇಕಾದರೂ ಮಂತ್ರಿ ಆಗಬಹುದಿತ್ತು. ಆದರೆ ಅವರು ಯಾವತ್ತೂ ಅಧಿಕಾರ ಬಯಸಲಿಲ್ಲ. ಪಕ್ಷ ಸಂಘಟನೆಯಲ್ಲೇ ಅವರು ತಮ್ಮನ್ನು ತೊಡಗಿಸಿಕೊಂಡರು. ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ನನ್ನ ಮೇಲೆ ಅಪಾರವಾದ ನಂಬಿಕೆ, ವಿಶ್ವಾಸ ಇಟ್ಟಿದ್ದರು.ನನ್ನ ಕಷ್ಟದ ದಿನಗಳಲ್ಲಿ ನನ್ನ ಜತೆ ನಿಂತರು. ಅವರು ರಾಜ್ಯಸಭೆ ಚುನಾವಣೆಗೆ ನಿಂತಾಗ ಅದರ ಜವಾಬ್ದಾರಿ ಯಾರಿಗೆ ಬೇಕಾದರೂ ಕೊಡಬಹುದಿತ್ತು. ಆದರೆ ಅವರು ನನ್ನ ಮೇಲೆ ನಂಬಿಕೆ ಇಟ್ಟು ತಮ್ಮ ಶಾಸಕರನ್ನು ಕಳುಹಿಸಿಕೊಟ್ಟರು. ಒಂದು ವಾರದ ಹಿಂದೆ ಅವರ ಜತೆ ದೂರ ವಾಣಿಯಲ್ಲಿ ಮಾತನಾಡಿದ್ದೆ. ಅವರು ಕೊಟ್ಟ ಮಾರ್ಗದರ್ಶನ, ಧೈರ್ಯವೇ ನಮಗೆ ಶಕ್ತಿ. ದೇಶದ ಉದ್ದಗಲಕ್ಕೂ ಸಾವಿರಾರು ನಾಯಕರನ್ನು ಗುರುತಿಸಿ, ಬೆಳೆಸಿ ಶಕ್ತಿ ತುಂಬಿದ ಧೀಮಂತ ನಾಯಕ ಅವರು ಎಂದು ಅಹಮದ್ ಪಟೇಲರ ಗುಣಗಾನ ಮಾಡಿದರು.
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…