Featured

ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? : ಡಿಕೆಶಿ -Vishwanews24

ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? : ಡಿಕೆಶಿ -Vishwanews24

ಬೆಂಗಳೂರುರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ರಾಜಕೀಯ ದ್ವೇಷದಿಂದ ನನ್ನ ವಿರುದ್ಧ ಸಿಬಿಐ ವಿಚಾರಣೆ ನಡೆಸಲಾಗುತ್ತಿದೆ. ನಾನು ಮಾಡಬಾರದ ಕೆಲಸ ಮಾಡಿಲ್ಲ. ಹೀಗಾಗಿ ಹೆದರುವ ಅಗತ್ಯವಿಲ್ಲ. ನಾನು ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ ನೀಡಿದ್ದಾರೆ. ಇದುವರೆಗೂ ಯಾರ ಮೇಲೆ ಈ ರೀತಿ ತನಿಖೆ ಮಾಡಿಸಿದ್ದಾರೆ? ರಾಜ್ಯದಲ್ಲಿ ನಾನೊಬ್ಬನೇ ಆಸ್ತಿ ಸಂಪಾದಿಸಿದ್ದೇನಾ? ನನ್ನ ಮೇಲೆ ಯಾವುದಾದರೂ ದೂರು ದಾಖಲಾಗಿದೆಯಾ? ಯಾವುದಾದರೂ ಆರೋಪ ಸಾಬೀತಾಗಿದೆಯಾ? ಯಾರ ಬಳಿಯಾದರೂ ನಾನು ಲಂಚ ಪಡೆದಿದ್ದೇನಾ? ಅಧಿಕಾರ ದುರುಪಯೋಗ ಮಾಡಿಕೊಂಡಿದ್ದೇನಾ? ಇಂಧನ ಸಚಿವ ಆಗಿದ್ದಾಗ ಅಕ್ರಮ ಮಾಡಿದ್ದೇನಾ? ಯಡಿಯೂರಪ್ಪನವರೇ ಅಧಿಕಾರದಲ್ಲಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಲಿ. ಅದನ್ನು ಬಿಟ್ಟು ಸಿಬಿಐಗೆ ಕೊಡುವ ಅಗತ್ಯ ಏನಿತ್ತು?’ ಎಂದು ಅವರು ಖಾರವಾಗಿಯೇ ಪ್ರಶ್ನಿಸಿದರು.

‘ಇದೊಂದು ತನಿಖೆ ಮಾಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಅವರೇ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿರುವ ಎಸಿಬಿಯಿಂದಲೇ ವಿಚಾರಣೆ ನಡೆಸಬಹುದು ಎಂದು ತಿಳಿದ್ದಾರೆ. ಆದರೂ ಸರ್ಕಾರದ ಒತ್ತಡದ ಮೇಲೆ ಈ ವಿಚಾರಣೆ ನಡೆಯುತ್ತಿದೆ. ನಾನು ಸಿಬಿಐ ಅಧಿಕಾರಿಗಳ ತನಿಖಾ ವ್ಯವಸ್ಥೆ ಪ್ರಶ್ನಿಸುವುದಿಲ್ಲ. ಅವರು ನಮಗೆ ಯಾವುದೇ ರೀತಿಯ ತೊಂದರೆ ನೀಡುತ್ತಿಲ್ಲ. ಅವರು ಅವರ ಕರ್ತವ್ಯ ಮಾಡುತ್ತಿದ್ದಾರೆ.

ಅಹ್ಮದ್ ಪಟೇಲ್ ಅವರ ನಿಧನ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಮ್ಮ ಪಕ್ಷಕ್ಕೆ ನಿಷ್ಠೆಯಿಂದ ಇದ್ದ ನಾಯಕರು. ರಾಜ್ಯಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅವರು ಯಾವಾಗ ಬೇಕಾದರೂ ಮಂತ್ರಿ ಆಗಬಹುದಿತ್ತು. ಆದರೆ ಅವರು ಯಾವತ್ತೂ ಅಧಿಕಾರ ಬಯಸಲಿಲ್ಲ. ಪಕ್ಷ ಸಂಘಟನೆಯಲ್ಲೇ ಅವರು ತಮ್ಮನ್ನು ತೊಡಗಿಸಿಕೊಂಡರು. ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ನನ್ನ ಮೇಲೆ ಅಪಾರವಾದ ನಂಬಿಕೆ, ವಿಶ್ವಾಸ ಇಟ್ಟಿದ್ದರು.ನನ್ನ ಕಷ್ಟದ ದಿನಗಳಲ್ಲಿ ನನ್ನ ಜತೆ ನಿಂತರು. ಅವರು ರಾಜ್ಯಸಭೆ ಚುನಾವಣೆಗೆ ನಿಂತಾಗ ಅದರ ಜವಾಬ್ದಾರಿ ಯಾರಿಗೆ ಬೇಕಾದರೂ ಕೊಡಬಹುದಿತ್ತು. ಆದರೆ ಅವರು ನನ್ನ ಮೇಲೆ ನಂಬಿಕೆ ಇಟ್ಟು ತಮ್ಮ ಶಾಸಕರನ್ನು ಕಳುಹಿಸಿಕೊಟ್ಟರು. ಒಂದು ವಾರದ ಹಿಂದೆ ಅವರ ಜತೆ ದೂರ ವಾಣಿಯಲ್ಲಿ ಮಾತನಾಡಿದ್ದೆ. ಅವರು ಕೊಟ್ಟ ಮಾರ್ಗದರ್ಶನ, ಧೈರ್ಯವೇ ನಮಗೆ ಶಕ್ತಿ. ದೇಶದ ಉದ್ದಗಲಕ್ಕೂ ಸಾವಿರಾರು ನಾಯಕರನ್ನು ಗುರುತಿಸಿ, ಬೆಳೆಸಿ ಶಕ್ತಿ ತುಂಬಿದ ಧೀಮಂತ ನಾಯಕ ಅವರು ಎಂದು ಅಹಮದ್ ಪಟೇಲರ ಗುಣಗಾನ ಮಾಡಿದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

14 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

15 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago