Featured

ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? : ಡಿಕೆಶಿ -Vishwanews24

ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? : ಡಿಕೆಶಿ -Vishwanews24

ಬೆಂಗಳೂರುರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ರಾಜಕೀಯ ದ್ವೇಷದಿಂದ ನನ್ನ ವಿರುದ್ಧ ಸಿಬಿಐ ವಿಚಾರಣೆ ನಡೆಸಲಾಗುತ್ತಿದೆ. ನಾನು ಮಾಡಬಾರದ ಕೆಲಸ ಮಾಡಿಲ್ಲ. ಹೀಗಾಗಿ ಹೆದರುವ ಅಗತ್ಯವಿಲ್ಲ. ನಾನು ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ ನೀಡಿದ್ದಾರೆ. ಇದುವರೆಗೂ ಯಾರ ಮೇಲೆ ಈ ರೀತಿ ತನಿಖೆ ಮಾಡಿಸಿದ್ದಾರೆ? ರಾಜ್ಯದಲ್ಲಿ ನಾನೊಬ್ಬನೇ ಆಸ್ತಿ ಸಂಪಾದಿಸಿದ್ದೇನಾ? ನನ್ನ ಮೇಲೆ ಯಾವುದಾದರೂ ದೂರು ದಾಖಲಾಗಿದೆಯಾ? ಯಾವುದಾದರೂ ಆರೋಪ ಸಾಬೀತಾಗಿದೆಯಾ? ಯಾರ ಬಳಿಯಾದರೂ ನಾನು ಲಂಚ ಪಡೆದಿದ್ದೇನಾ? ಅಧಿಕಾರ ದುರುಪಯೋಗ ಮಾಡಿಕೊಂಡಿದ್ದೇನಾ? ಇಂಧನ ಸಚಿವ ಆಗಿದ್ದಾಗ ಅಕ್ರಮ ಮಾಡಿದ್ದೇನಾ? ಯಡಿಯೂರಪ್ಪನವರೇ ಅಧಿಕಾರದಲ್ಲಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಲಿ. ಅದನ್ನು ಬಿಟ್ಟು ಸಿಬಿಐಗೆ ಕೊಡುವ ಅಗತ್ಯ ಏನಿತ್ತು?’ ಎಂದು ಅವರು ಖಾರವಾಗಿಯೇ ಪ್ರಶ್ನಿಸಿದರು.

‘ಇದೊಂದು ತನಿಖೆ ಮಾಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಅವರೇ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿರುವ ಎಸಿಬಿಯಿಂದಲೇ ವಿಚಾರಣೆ ನಡೆಸಬಹುದು ಎಂದು ತಿಳಿದ್ದಾರೆ. ಆದರೂ ಸರ್ಕಾರದ ಒತ್ತಡದ ಮೇಲೆ ಈ ವಿಚಾರಣೆ ನಡೆಯುತ್ತಿದೆ. ನಾನು ಸಿಬಿಐ ಅಧಿಕಾರಿಗಳ ತನಿಖಾ ವ್ಯವಸ್ಥೆ ಪ್ರಶ್ನಿಸುವುದಿಲ್ಲ. ಅವರು ನಮಗೆ ಯಾವುದೇ ರೀತಿಯ ತೊಂದರೆ ನೀಡುತ್ತಿಲ್ಲ. ಅವರು ಅವರ ಕರ್ತವ್ಯ ಮಾಡುತ್ತಿದ್ದಾರೆ.

ಅಹ್ಮದ್ ಪಟೇಲ್ ಅವರ ನಿಧನ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಮ್ಮ ಪಕ್ಷಕ್ಕೆ ನಿಷ್ಠೆಯಿಂದ ಇದ್ದ ನಾಯಕರು. ರಾಜ್ಯಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅವರು ಯಾವಾಗ ಬೇಕಾದರೂ ಮಂತ್ರಿ ಆಗಬಹುದಿತ್ತು. ಆದರೆ ಅವರು ಯಾವತ್ತೂ ಅಧಿಕಾರ ಬಯಸಲಿಲ್ಲ. ಪಕ್ಷ ಸಂಘಟನೆಯಲ್ಲೇ ಅವರು ತಮ್ಮನ್ನು ತೊಡಗಿಸಿಕೊಂಡರು. ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ನನ್ನ ಮೇಲೆ ಅಪಾರವಾದ ನಂಬಿಕೆ, ವಿಶ್ವಾಸ ಇಟ್ಟಿದ್ದರು.ನನ್ನ ಕಷ್ಟದ ದಿನಗಳಲ್ಲಿ ನನ್ನ ಜತೆ ನಿಂತರು. ಅವರು ರಾಜ್ಯಸಭೆ ಚುನಾವಣೆಗೆ ನಿಂತಾಗ ಅದರ ಜವಾಬ್ದಾರಿ ಯಾರಿಗೆ ಬೇಕಾದರೂ ಕೊಡಬಹುದಿತ್ತು. ಆದರೆ ಅವರು ನನ್ನ ಮೇಲೆ ನಂಬಿಕೆ ಇಟ್ಟು ತಮ್ಮ ಶಾಸಕರನ್ನು ಕಳುಹಿಸಿಕೊಟ್ಟರು. ಒಂದು ವಾರದ ಹಿಂದೆ ಅವರ ಜತೆ ದೂರ ವಾಣಿಯಲ್ಲಿ ಮಾತನಾಡಿದ್ದೆ. ಅವರು ಕೊಟ್ಟ ಮಾರ್ಗದರ್ಶನ, ಧೈರ್ಯವೇ ನಮಗೆ ಶಕ್ತಿ. ದೇಶದ ಉದ್ದಗಲಕ್ಕೂ ಸಾವಿರಾರು ನಾಯಕರನ್ನು ಗುರುತಿಸಿ, ಬೆಳೆಸಿ ಶಕ್ತಿ ತುಂಬಿದ ಧೀಮಂತ ನಾಯಕ ಅವರು ಎಂದು ಅಹಮದ್ ಪಟೇಲರ ಗುಣಗಾನ ಮಾಡಿದರು.

Vishwa News 24

Recent Posts

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

27 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

50 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

1 hour ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

2 hours ago