Featured

ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ – vishwanews24

ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ ..

ಯಾವ ಜಿಲ್ಲೆಗೆ ಎಷ್ಟು ಡೋಸ್ ಹಂಚಿಕೆ?

ಬೆಂಗಳೂರು: ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.

ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು.

60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ.

ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ?

ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

5 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

5 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

6 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

6 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

6 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

6 days ago