Featured

ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ – vishwanews24

ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ ..

ಯಾವ ಜಿಲ್ಲೆಗೆ ಎಷ್ಟು ಡೋಸ್ ಹಂಚಿಕೆ?

ಬೆಂಗಳೂರು: ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.

ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು.

60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ.

ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ?

ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

22 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

1 day ago