ಬೆಂಗಳೂರು: ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.
ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು.
60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ.
ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ?
ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…