ಬೆಂಗಳೂರು: ರಾಜ್ಯ ಸರಕಾರ ಜಾರಿಗೆ ತಂದಿರುವ ಮಹತ್ವವ ಗೋ ಹತ್ಯೆ ನಿಷೇಧ ಕಾಯಿದೆ ಸೋಮವಾರದಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.
ಈ ಸಂಬಂಧ ಪಶುಸಂಗೋಪನಾ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಗೋಹತ್ಯೆ ನಿಷೇಧದ ಹಿನ್ನೆಲೆ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಒಂದು ವೇಳೆ ಗೋ ಹತ್ಯೆ ನಿಷೇಧ ಕಾಯಿದೆ ಉಲ್ಲಂಘನೆ ಮಾಡಿದರೆ ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ, ಐದು ಲಕ್ಷ ರೂಪಾಯಿ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.ಅಕ್ರಮವಾಗಿ ಗೋವುಗಳ ಸಾಗಾಟ ಮಾಡುವುದು ಕಂಡುಬಂದರೆ ಕಠಿಣ ಶಿಕ್ಷೆ ವಿಧಿಸಬಹುದಾಗಿದೆ. ಇದಲ್ಲದೇ ಇನ್ನೂ ಹತ್ತು ಹಲವಾರು ಮಾರ್ಗಸೂಚಿಯಲ್ಲಿ ನೀಡಲಾಗಿದೆ.
ಗೋವುಗಳ ಹತ್ಯೆ, ಅಕ್ರಮ ಸಾಗಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಗೋವುಗಳ ಅಕ್ರಮ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು. ಈ ಮೂಲಕ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಮನವಿ ಮಾಡಿಕೊಂಡಿದ್ದಾರೆ..
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…