Featured

ರಾಜ್ಯದಲ್ಲಿ ಇವತ್ತಿನವರೆಗೂ ನಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ : ಸಿದ್ದರಾಮಯ್ಯ – vishwanews24

ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು..

ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ..

ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದವರು..

ಜನರ ತೀರ್ಮಾನವನ್ನು ಒಪ್ಪಿ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ನಾವು ಅಧಿಕಾರಕ್ಕೆ ಬಂದಿದ್ದೇವೆ..

ಬೆಂಗಳೂರು : ರಾಜ್ಯದಲ್ಲಿ ಇವತ್ತಿನವರೆಗೂ ನಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ ಅಷ್ಟೇ. ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್. ಬಿಜೆಪಿಯಿಂದ ಬಿಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್‌ ಶೆಟ್ಟರ್, ಡಿವಿ ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದರು.

ಬಿಜೆಪಿಯವರು ಕರ್ನಾಟಕದಲ್ಲಿ ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ, ಇದ್ದರೆ ತೋರಿಸಿ ಎಂದು ಸವಾಲು ಹಾಕಿದ ಸಿದ್ದರಾಮಯ್ಯ, ನಾವು 2013ರಲ್ಲಿ ಹಾಗೂ 2023ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದು ಬಿಜೆಪಿಗೆ ಟಾಂಗ್‌ ನೀಡಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

3 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

4 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

5 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

5 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

6 hours ago