ಬೆಂಗಳೂರು : ರಾಜ್ಯದಲ್ಲಿ ಇವತ್ತಿನವರೆಗೂ ನಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ ಅಷ್ಟೇ. ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್. ಬಿಜೆಪಿಯಿಂದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಡಿವಿ ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದರು.
ಬಿಜೆಪಿಯವರು ಕರ್ನಾಟಕದಲ್ಲಿ ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ, ಇದ್ದರೆ ತೋರಿಸಿ ಎಂದು ಸವಾಲು ಹಾಕಿದ ಸಿದ್ದರಾಮಯ್ಯ, ನಾವು 2013ರಲ್ಲಿ ಹಾಗೂ 2023ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದು ಬಿಜೆಪಿಗೆ ಟಾಂಗ್ ನೀಡಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…