ರಾಜ್ಯದಲ್ಲಿ ಈ ಬಾರಿಯ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ : ಕಂದಾಯ ಸಚಿವ ಆರ್. ಅಶೋಕ್ – Vishwanews24

Featured, ರಾಜ್ಯ ನ್ಯೂಸ್

 ರಾಜ್ಯದಲ್ಲಿ ಈ ಬಾರಿಯ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ : ಕಂದಾಯ ಸಚಿವ

ಆರ್. ಅಶೋಕ್

ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ. ಪರಿಸರ ಗಣೇಶ ಕೂರಿಸಬೇಕು ಎಂದು ಹೇಳಿದ್ದಾರೆ.

ಕೋವಿಡ್ ವೇಳೆ ವಾರ್ಡ್ ಗೆ ಒಂದು ಗಣಪತಿ ಎಂದು ನಿರ್ಬಂಧ ಹೇರಲಾಗಿತ್ತು. ಮುಂಜಾಗ್ರತ ಕ್ರಮವಾಗಿ ಈ ಹಿಂದೆ ಗಣೇಶ ಹಬ್ಬ ಆಚರಣೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ತಿಳಿಸಿದ್ದಾರೆ.

BREAKING : ಕಾಮನ್ ವೆಲ್ತ್ ಗೇಮ್ಸ್ – ಚಿನ್ನದ ಪದಕ ಗೆದ್ದ ಪಿ.ವಿ.ಸಿಂಧು – Vishwanews24

 

Leave a Reply