ಶಿರಾ : ರಾಜ್ಯದಲ್ಲಿರುವ ಭ್ರಷ್ಟಸರ್ಕಾರವನ್ನು ಕಿತ್ತೊಗೆಯಬೇಕು, ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಹೆಣ್ಣುಮಕ್ಕಳಿಗೆ 2000 ರು. ಸಹಾಯಧನ ಉಚಿತ, 10 ಕೆಜಿ ಅಕ್ಕಿ ಖಚಿತ, 200 ವ್ಯಾಟ್ ವಿದ್ಯುತ್ ನಿಶ್ಚಿತ, ನಿರುದ್ಯೋಗಿಗಳಿಗೆ 3000 ರು. ಖಂಡಿತ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಹಳ ವರ್ಷಗಳಿಂದ ಕಾಂಗ್ರೆಸ್ ಪಕ್ಷ ಗೆದ್ದಿಲ್ಲ. ಈ ಬಾರಿ ಮತದಾರರು ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಪಕ್ಷ ಒಳ್ಳೆಯ ಗ್ಯಾರಂಟಿ ಕಾರ್ಡುಗಳನ್ನು ಕೊಟ್ಟಿದೆ ಉತ್ತಮ ಆಡಳಿತ ನೀಡಿದ್ದೇವೆ ಎಂದ ಅವರು ಬಹಳ ದಿನಗಳಿಂದ ಕಿರಣ್ ಕುಮಾರ್ ಅವರಿಗೆ ಗಾಳ ಹಾಕುತ್ತಿದ್ದೆವು. ಈಗ ನಮ್ಮ ಗಾಳಕ್ಕೆ ಬಿದ್ದಿದ್ದಾರೆ. ಟಿಕೆಟ್ ಸಹ ನೀಡಿದ್ದೇವೆ ಗೆಲ್ಲಿಸುವ ಜವಾಬ್ದಾರಿ ನಿಮ್ಮದು. ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಕಾರ್ಡ್ಗಳ ಬಗ್ಗೆ ಜನರಿಗೆ ತಲುಪಿಸಿದರೆ ಗೆಲುವು ನಿಶ್ಚಿತ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಿಕ್ಕಣ್ಣ, ಮುಖಂಡರಾದ ಬಸವರಾಜು, ಡಾ.ಪರಮೇಶ್ವರಯ್ಯ, ಹೊಸಪಾಳ್ಯ ಲಿಂಗಪ್ಪ, ಪುಟ್ಟರಾಜು, ಸಿದ್ದಲಿಂಗಪ್ಪ, ಜಯಪ್ರಕಾಶ್, ಕರ್ನಾಟಕ ರಾಜ್ಯ ಬೀಜ ನಿಗಮದ ಮಾಜಿ ನಿರ್ದೇಶಕರು ನೇರಲಗುಡ್ಡ ಶಿವಕುಮಾರ್, ವಡ್ಡನಹಳ್ಳಿ ವಿಜಯಕುಮಾರ್, ಬುಕ್ಕಾಪಟ್ಟಣ ಪ್ರಭಾಕರ್, ಬೆಂಚೆ ಮಂಜು ಸೇರಿದಂತೆ ಹಲವರು ಹಾಜರಿದ್ದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…