ರಾಜ್ಯದಲ್ಲಿ ಉರುಳಿ ಬೀಳಲು ಕಾಂಗ್ರೆಸ್ ಸರ್ಕಾರ ಮಡಿಕೆನಾ ..? ಡಿಕೆ ಶಿವಕುಮಾರ್ Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಉರುಳಿ ಬೀಳಲು ಕಾಂಗ್ರೆಸ್ ಸರ್ಕಾರ ಮಡಿಕೆನಾ ..? ಡಿಕೆ ಶಿವಕುಮಾರ್

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿ ಬೀಳಲು ಕಾಂಗ್ರೆಸ್ ಸರ್ಕಾರ ಮಡಿಕೆನಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

ಹಾಸನದ ಬೇಲೂರುನಲ್ಲಿ ಅಯೋಜಿಸಿದ್ದ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಮತಯಾಚನೆ ಮಾಡಿದ ವೇಳೆ ಹೆಚ್ ಡಿ ದೇವೇಗೌಡರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನತೆ ನಮ್ಮನ್ನು 136 ಸೀಟು ನೀಡಿ ಆಶೀರ್ವಾದ ಮಾಡಿದ್ದಾರೆ. ತಾವು ಮನಸ್ಸು ಮಾಡಿದ್ದರೆ ಜೆಡಿಎಸ್ ಪೆಟ್ಟಿಗೆಯೆಲ್ಲ ಖಾಲಿಯಾಗೋದು, ಆದರೆ ಸಿದ್ದರಾಮಯ್ಯ ಮತ್ತು ದೆಹಲಿ ನಾಯಕರು ಸ್ವಲ್ಪ ನಿಧಾನಿಸುವಂತೆ ಹೇಳಿದ್ದಾರೆ, ಹೀಗಾಗಿ ತಡೆದುಕೊಳ್ಳಲಾಗಿದೆ ಎಂದರು.

ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು : ಫಯಾಜ್ ತಾಯಿ – Vishwanews24

ಇನ್ನು ರಾಜ್ಯದಲ್ಲಿ ತಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ ಹಾಗೆಯೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದಾರೆ. ಮಹಾಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ ವರ್ಷಕ್ಕೆ 1 ಲಕ್ಷ ರೂ., ನಿರುದ್ಯೋಗಿ ಯುವಕರಿಗೂ ವಾರ್ಷಿಕ ತಲಾ 1 ಲಕ್ಷ ರೂ., 25 ಲಕ್ಷ ರೂ. ಗಳ ಆರೋಗ್ಯ ವಿಮೆ ಮತ್ತು ರೈತರಿಗೆ ಡಾ ಸ್ವಾಮಿನಾಥನ್ ಆಯೋಗ ವರದಿ ಶಿಫಾರಸ್ಸಿನ ಹಾಗೆ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಗ್ಯಾರಂಟಿಗಳನ್ನು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ ಎಂದು ಹೇಳಿದರು.

UDUPI : ಸಿದ್ದರಾಮಯ್ಯ ಆಳ್ವಿಕೆಯಲ್ಲಿ ಹಿಂದೂ ಸಮಾಜಕ್ಕೆ ಉಳಿಗಾಲ ಇಲ್ಲ ಎಂಬ ಆತಂಕ ಕಾಡುತ್ತಿದೆ: ಯಶ್ಪಾಲ್ ಸುವರ್ಣ – Vishwanews24

Leave a Reply