Featured

ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಚಿಂತನೆ: ಆರಗ ಜ್ಞಾನೇಂದ್ರ – Vishwanews24

ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಚಿಂತನೆ: ಆರಗ ಜ್ಞಾನೇಂದ್ರ – Vishwanews24

ಬೆಳಗಾವಿ: ಬೆಳಗಾವಿಯಲ್ಲಿ ಜನರೇ ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡಿದ್ದಾರೆ. ರಾಜ್ಯದಲ್ಲಿ ಅದನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೋಮವಾರ ಹೇಳಿದ್ದಾರೆ.

ಇಂದು ಎಂಇಎಸ್ ನಿಷೇಧಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಯಾವುದೇ ರೀತಿಯ ಗಲಾಟೆ ಇಲ್ಲ. ಕನ್ನಡಿಗರು ಹಾಗೂ ಮರಾಠಿಗರು ಇಲ್ಲಿ ಸೌಹಾರ್ದಯುತವಾಗಿ ಜೀವನ ಸಾಗಿಸುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ ಎಂದರು.

ಪ್ರಜಾಪ್ರಭುತ್ವದ ತಳಹದಿಯಲ್ಲಿ ಕನ್ನಡ ಪರ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿ. ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಜನರೇ ಬ್ಯಾನ್ ಮಾಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಎಂಇಎಸ್ ಸಂಘಟನೆಯ ಮೇಲೆ ನಿಷೇಧ ಹೇರುವ ಬಗ್ಗೆ ಚಿಂತನೆ ಮಾಡುತ್ತೇವೆ. ನಾಡದ್ರೋಹಿ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ರಾಜ್ಯದಲ್ಲಿ ಆಗಿರುವ ಗಲಾಟೆಗೆ ಸಂಬಂಧಿಸಿದಂತೆ ಎಷ್ಟು ಜನ ಎಂಇಎಸ್ ಸದಸ್ಯರನ್ನು ಬಂಧಿಸಲಾಗಿದೆ ಎಂಬ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, ಸದನದಲ್ಲಿ ಈ ಬಗ್ಗೆ ಉತ್ತರ ನೀಡುವುದಾಗಿ ಗೃಹ ಸಚಿವರು ತಿಳಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago