Featured

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ – vishwanews24

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ  ಜಿಲ್ಲೆಯ ಹಲವು ಭಾಗಗಳಲ್ಲಿ ಬುಧವಾರ ಅರ್ಧ ಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆ ಸುರಿದಿದೆ. ಕೆಲವೆಡೆ ಗುಡುಗಿನ ಅಬ್ಬರದ ಜತೆಗೆ ಆಲಿಕಲ್ಲುಗಳೂ ಬಿದ್ದಿವೆ. ಖಾನಾಪುರ, ಬೆಳಗಾವಿ, ಹುಕ್ಕೇರಿ, ಸವದತ್ತಿ, ರಾಮದುರ್ಗ, ಯರಗಟ್ಟಿ, ಬೈಲಹೊಂಗಲ, ಮೂಡಲಗಿ ತಾಲೂಕಿನ ಹಲವು ಗ್ರಾಮಗಳಲ್ಲಿ ಸಾಧಾರಣ ಮಳೆ ಸುರಿಯಿತು.

ಇದನ್ನೂ ಓದಿ: 

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಅಂಡಾರು, ಕಾಡುಹೊಳೆ, ಮುನಿಯಾಲು, ಮುಟ್ಲುಪಾಡಿ ಮೊದಲಾದೆಡೆ ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿಮಳೆಗೆ ಹಾನಿ ಸಂಭವಿಸಿದೆ. ಅಜೆಕಾರು, ಅಂಡಾರು ಪರಿಸರದಲ್ಲಿ 30ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿವೆ.

ಆರೆಂಜ್ ಅಲರ್ಟ್:
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮಾ.26ರಿಂದ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಮಾ.26ರಂದು ಬಿರುಗಾಳಿ, ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ರೈತರು, ಕುರಿಗಾಹಿಗಳು ಎಚ್ಚರಿಕೆವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ.

ಬೆಂ.ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರದಲ್ಲಿ ಇಂದು (ಮಾ.26) ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ:

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

13 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

13 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

13 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

14 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

14 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

15 hours ago