ಬೆಂಗಳೂರು : ಮಧ್ಯ ಮಹಾರಾಷ್ಟ್ರದಿಂದ ತಮಿಳುನಾಡುವರೆಗೆ ತೇವಾಂಶಭರಿತ ಮೋಡಗಳು ಹಾದುಹೋಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗಲಿದ್ದು ಈ ಹಿನ್ನೆಲೆ ಹವಮಾನ ಇಲಾಖೆಯು ಕರಾವಳಿಯ ದಕ್ಷಿಣ ಕನ್ನಡ ಸೇರಿ ಹಲವೆಡೆ ಏ.13ರಿಂದ ಏ.16ರವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಏ.14ರಿಂದ ಮೂರು ದಿನಗಳವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದ್ದು ಈ ಹಿನ್ನೆಲೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.
ಯುಗಾದಿ ಹಬ್ಬದ ಸಂಭ್ರಮ : ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ -Vishwanews24
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ 72 ಗಂಟೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ ಎಂದು ಕೂಡಾ ಇಲಾಖೆ ತಿಳಿಸಿದೆ.
ಇನ್ನು ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣದಿಂದಾಗಿ ತಮಿಳುನಾಡು, ಕೇರಳ, ಮಧ್ಯಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಮಧ್ಯಪ್ರದೇಶ, ವಿದರ್ಭ, ತೆಲಂಗಾಣ, ಛತ್ತೀಸ್ಗಢ, ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಮುಂದಿನ 5 ದಿನ ಮಳೆಯಾಗಲಿದೆ. ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ತಿಸ್ತಾನ್, ಮುಜರ್ಬಾದ್, ಹಿಮಾಚಲ ಪ್ರದೇಶದಲ್ಲಿ ಏ.14ರಂದ 16ರವರೆಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಕೂಡಾ ಇಲಾಖೆ ಮಾಹಿತಿ ನೀಡಿದೆ.
ಮಂಗಳೂರು : ನೈಟ್ ಕರ್ಫ್ಯೂ ಉಲ್ಲಂಘನೆ , 2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…