ಬೆಂಗಳೂರು: ರಾಜ್ಯದಲ್ಲಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರವಾಗಿರುವವರ ಕುರಿತು 25 ವರ್ಷಗಳ ಮಾಹಿತಿ ನೀಡಬೇಕು ಎಂದು ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ವಿವಿಧ ಇಲಾಖೆಗಳಿಗೆ ಸೂಚಿಸಿದೆ.
ಸಮಾಜ ಕಲ್ಯಾಣ ಇಲಾಖೆ, ಪೊಲೀಸ್, ಕಂದಾಯ ಇಲಾಖೆಗಳು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಂದ ಈ ಮಾಹಿತಿಯನ್ನು ಸಂಗ್ರಹಿಸಿ, ವರದಿ ತಯಾರಿಸಿ ಸಮಿತಿಗೆ ಒಪ್ಪಿಸಬೇಕು ಎಂದೂ ಹೇಳಿದೆ.
ರಾಜ್ಯದಲ್ಲಿ 2016 ರಿಂದ 2021 ರ ಅವಧಿಯಲ್ಲಿ ದಾಖಲಾದ ಒಟ್ಟು 36 ಪ್ರಕರಣಗಳ ಪ್ರಗತಿ ಹಾಗೂ ಕಾನೂನು ವಿಚಾರಣೆ ಹಂತದಲ್ಲಿ ಶಿಕ್ಷೆಯಾಗಿರುವ ಪ್ರಕರಣಗಳ ಮಾಹಿತಿ ನೀಡಬೇಕು. ಇವೆಲ್ಲದರ ಮಾಹಿತಿಯನ್ನು ಗೃಹ ಇಲಾಖೆಯಿಂದ ಸಂಗ್ರಹಿಸಿ ಕೊಡುವಂತೆಯೂ ಸೂಚಿಸಲಾಗಿದೆ.
ಬಲವಂತವಾಗಿ ಬೇರೆ ಧರ್ಮಕ್ಕೆ ಮತಾಂತರ ಮಾಡಿರುವ ವಿಚಾರವಾಗಿ ಬಂದಿರುವ ದೂರುಗಳ ಬಗ್ಗೆ ಎಫ್ಐಆರ್ ದಾಖಲಿಸಿಕೊಂಡು ಕ್ರಮ ಕೈಗೊಂಡಿರುವ ಬಗ್ಗೆ ಗೃಹ ಇಲಾಖೆಯಿಂದ ಮಾಹಿತಿ ಸಂಗ್ರಹಿಸಬೇಕು. ಚಿತ್ರದುರ್ಗ ಜಿಲ್ಲೆಯ ಬೆಥೆಲ್ ಬ್ಯಾಪ್ಟಿಸ್ಟ್ ಚರ್ಚಿನ ವಿವರವಾದ ಮಾಹಿತಿ ಒದಗಿಸಿ ನೀಡಬೇಕು.
ಅಧಿಕೃತ ಮತ್ತು ಕಾನೂನಾತ್ಮಕವಾಗಿ ನಡೆಸುತ್ತಿರುವಂತಹ ಚರ್ಚ್ಗಳಿಗೆ ಯಾವುದೇ ತೊಂದರೆ ಆಗದಂತೆ ಮೇಲ್ಕಂಡ ಹೆಚ್ಚುವರಿ ಮಾಹಿತಿಯನ್ನು ವಿವಿಧ ಇಲಾಖೆಗಳಿಂದ ಸಂಗ್ರಹಿಸಿ 30 ದಿನಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಸಮಿತಿಯ ಸೂಚನೆಯ ಅನ್ವಯ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…